ಬೀದರ್ : ನಗರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸ್ಮಶಾನ ಭೂಮಿ ಒದಗಿಸುವಂತೆ ಹೈದರಾಬಾದ್ ಕರ್ನಾಟಕ ಕ್ರಿಶ್ಚಿಯನ್ ಡೆವಲಪ್ಮೆಂಟ್ ಅಸೋಸಿಯೇಷನ್ ವತಿಯಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕ್ರಿಶ್ಚನ್ ಸಮುದಾಯಕ್ಕೆ 2 ಎಕರೆಯಲ್ಲಿ ಒಂದು ಸಮುದಾಯ ಭವನ ಹಾಗೂ ಸ್ಮಶಾನಕ್ಕೆ ಜಾಗ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕದ ಕ್ರಿಶ್ಚಿಯನ್ ಡೆವಲಪ್ಮೆಂಟ್ ಅಸೋಸಿಯೇಷನ್ ಕಾರ್ಯದರ್ಶಿ ಎಸ್ ಪಿ. ರಾಜಶೇಖರ್, ನಗರ ಸಭೆ ಸದಸ್ಯ ಸೈಮನ್ ಜೋಶ್ವಾ , ತಿಮ್ಮೊತಿ ಸೇರಿದಂತೆ ಇತರರು ಇದ್ದರು.