<p><strong>ಬೀದರ್:</strong> ಬೀದರ್ನ ಬಸವಗಿರಿಯ ಯಾತ್ರಿ ನಿವಾಸ ಕಟ್ಟಡದ ಎರಡನೇ ಹಾಗೂ ಮೂರನೇ ಮಹಡಿ ನಿರ್ಮಾಣಕ್ಕೆ ₹ 2 ಕೋಟಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಐತಿಹಾಸಿಕ ಭೂ ಕಾಲುವೆಯನ್ನು ಪುನರುಜ್ಜೀವನಗೊಳಿಸಿ ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಕೋವಿಡ್ ನಿರ್ವಹಣೆಗಾಗಿ ತಲಾ ₹ 5 ಲಕ್ಷ ಅನುದಾನ ಕೊಡಬೇಕು. ಹಾರೂರಗೇರಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಕಲ್ಪಿಸಬೇಕು. ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆ ಆಯೋಜಿಸುತ್ತಿರುವ ವಿಶ್ವ ಮಾನವ ದಿನಾಚರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸರ್ಕಾರ ₹ 5 ಲಕ್ಷ ವಿಶೇಷ ಅನುದಾನ ಒದಗಿಸಿ 15 ಕಲಾ ತಂಡಗಳ ಪ್ರಾಯೋಜಕತ್ವ ವಹಿಸಿಕೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.</p>.<p>ಸೂರ್ಯಕಾಂತ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೀದರ್ನ ಬಸವಗಿರಿಯ ಯಾತ್ರಿ ನಿವಾಸ ಕಟ್ಟಡದ ಎರಡನೇ ಹಾಗೂ ಮೂರನೇ ಮಹಡಿ ನಿರ್ಮಾಣಕ್ಕೆ ₹ 2 ಕೋಟಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಐತಿಹಾಸಿಕ ಭೂ ಕಾಲುವೆಯನ್ನು ಪುನರುಜ್ಜೀವನಗೊಳಿಸಿ ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಕೋವಿಡ್ ನಿರ್ವಹಣೆಗಾಗಿ ತಲಾ ₹ 5 ಲಕ್ಷ ಅನುದಾನ ಕೊಡಬೇಕು. ಹಾರೂರಗೇರಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಕಲ್ಪಿಸಬೇಕು. ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆ ಆಯೋಜಿಸುತ್ತಿರುವ ವಿಶ್ವ ಮಾನವ ದಿನಾಚರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸರ್ಕಾರ ₹ 5 ಲಕ್ಷ ವಿಶೇಷ ಅನುದಾನ ಒದಗಿಸಿ 15 ಕಲಾ ತಂಡಗಳ ಪ್ರಾಯೋಜಕತ್ವ ವಹಿಸಿಕೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.</p>.<p>ಸೂರ್ಯಕಾಂತ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>