ಬಳಿಕ ಮಾತನಾಡಿದ ಈಶ್ವರ ಖಂಡ್ರೆ,‘ಕ್ಷೇತ್ರದ ಬಡಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ನಾನು ಹಾಗೂ ನನ್ನ ಬೆಂಬಲಿಗರು ಆಹಾರದ ಪೊಟ್ಟಣ, ತರಕಾರಿ ಕಿಟ್ ನೀಡಿದ್ದೇವೆ. ಪಡಿತರ ಕಾರ್ಡ್ ಹೊಂದಿದ ಎಲ್ಲ ಫಲಾನುಭವಿಗಳಿಗೆ, ಕಾರ್ಡ್ ರಹಿತ ಎಲ್ಲರಿಗೂ ಎರಡು ತಿಂಗಳ ಪಡಿತರ ಮುಂಗಡವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.