ಮತದಾನ ದಿನ ದಾಖಲಾಗುವ ಶೇಖಡಾವಾರು ಮತದಾನದ ವಿವರವನ್ನು ಕಾಲಕಾಲಕ್ಕೆ ಸಲ್ಲಿಸಲು ಕ್ರಮ ವಹಿಸಬೇಕು ಎಂದು ವಾರ್ತಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಒಟ್ಟು ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ಅಂಗವಿಕಲ ಮತದಾರರು ಇರುವುದನ್ನು ಗುರುತಿಸಲಾಗಿದೆ. ಅಲ್ಲಿ ವೀಲ್ಚೇರ್ ಮತ್ತು ವಾಹನದ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಅಣ್ಣಾರಾವ್ ಪಾಟೀಲ, ಜಯಶ್ರೀ, ಪೌರಾಯುಕ್ತ ಗೌತಮ ಕಾಂಬಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶರಣಯ್ಯ ಮಠಪತಿ ಇದ್ದರು.