‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಅಭಿವೃದ್ಧಿಗೆ ಖಾಲಿ ಹುದ್ದೆಗಳು ಮಾರಕ. ಶಿಕ್ಷಕರ ಹುದ್ದೆಗಳು ಖಾಲಿ ಇದ್ದಷ್ಟು ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬೀಳುತ್ತದೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.
ಧಾರವಾಡದ ಮನೋವಿಜ್ಞಾನ ಉಪನ್ಯಾಸಕ ಟಿ.ಪಿ.ಮಂಜುನಾಥ ಕಾರ್ಯಾಗಾರ ನಡೆಸಿಕೊಟ್ಟರು.ಡಾ. ವಿಜಯಶ್ರೀ ಬಶೆಟ್ಟಿ, ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಜಲಾದೆ, ಉಮಾಕಾಂತ ದೇವರಮನಿ, ಸುನೀಲ್, ಬಸೀರ್ ಇದ್ದರು. ವಿಜಯಕುಮಾರ ನಿರೂಪಣೆ ಮಾಡಿದರು. ಶಿಕ್ಷಕ ಹಣಮಂತ ಪಾಟೀಲ ವಂದಿಸಿದರು.