<p><strong>ಬೀದರ್:</strong> ದ್ವಿತೀಯ ಪಿಯುಸಿಯ 2021-22ನೇ ಸಾಲಿನ ಮಧ್ಯಾವಧಿ ಪರೀಕ್ಷೆಯನ್ನು ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲು ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಕಾರಣ ಪಿಯುಸಿ ಪ್ರಥಮ ವರ್ಷದ ತರಗತಿಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಮೂರು-ನಾಲ್ಕು ತಿಂಗಳು ತಡವಾಗಿ ತರಗತಿಗಳು ಪ್ರಾರಂಭವಾಗಿವೆ. ಮಧ್ಯಾವಧಿ ಪರೀಕ್ಷೆಗೆ ಇನ್ನೂ ಪಠ್ಯಕ್ರಮಗಳು ಮುಗಿದಿಲ್ಲ. ಇಂತಹ ಸಂದರ್ಭದಲ್ಲಿ ಮಂಡಳಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳ ಮೇಲೆ ಬಹಳ ಒತ್ತಡ ಹೇರಿದಂತಾಗಲಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ. ಇದರಿಂದ ವಿದ್ಯಾರ್ಥಿಗಳಷ್ಟೇ ಅಲ್ಲ; ಪ್ರಾಧ್ಯಾಪಕರು, ಪೋಷಕರು ಸಹ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಮಧ್ಯಾವಧಿ ಮಂಡಳಿ ಪರೀಕ್ಷೆ ಆದೇಶ ಹಿಂಪಡೆದು 2022 ರ ಜೂನ್ನಲ್ಲಿ ವಾರ್ಷಿಕ ಪರೀಕ್ಷೆ ನಡೆಸಬೇಕು. ಮಧ್ಯಾವಧಿ ಪರೀಕ್ಷೆಯನ್ನು ಮೊದಲಿನಂತೆ ಕಾಲೇಜು ಮಟ್ಟದಲ್ಲೇ ನಡೆಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ದ್ವಿತೀಯ ಪಿಯುಸಿಯ 2021-22ನೇ ಸಾಲಿನ ಮಧ್ಯಾವಧಿ ಪರೀಕ್ಷೆಯನ್ನು ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲು ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಕಾರಣ ಪಿಯುಸಿ ಪ್ರಥಮ ವರ್ಷದ ತರಗತಿಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಮೂರು-ನಾಲ್ಕು ತಿಂಗಳು ತಡವಾಗಿ ತರಗತಿಗಳು ಪ್ರಾರಂಭವಾಗಿವೆ. ಮಧ್ಯಾವಧಿ ಪರೀಕ್ಷೆಗೆ ಇನ್ನೂ ಪಠ್ಯಕ್ರಮಗಳು ಮುಗಿದಿಲ್ಲ. ಇಂತಹ ಸಂದರ್ಭದಲ್ಲಿ ಮಂಡಳಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳ ಮೇಲೆ ಬಹಳ ಒತ್ತಡ ಹೇರಿದಂತಾಗಲಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ. ಇದರಿಂದ ವಿದ್ಯಾರ್ಥಿಗಳಷ್ಟೇ ಅಲ್ಲ; ಪ್ರಾಧ್ಯಾಪಕರು, ಪೋಷಕರು ಸಹ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಮಧ್ಯಾವಧಿ ಮಂಡಳಿ ಪರೀಕ್ಷೆ ಆದೇಶ ಹಿಂಪಡೆದು 2022 ರ ಜೂನ್ನಲ್ಲಿ ವಾರ್ಷಿಕ ಪರೀಕ್ಷೆ ನಡೆಸಬೇಕು. ಮಧ್ಯಾವಧಿ ಪರೀಕ್ಷೆಯನ್ನು ಮೊದಲಿನಂತೆ ಕಾಲೇಜು ಮಟ್ಟದಲ್ಲೇ ನಡೆಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>