ಪ್ರೊ. ಬಸವರಾಜ ಬಿರಾದಾರ ಮಾತನಾಡಿ, ಪುರಂದರದಾಸರು ಜನಪದ ಹಾಗೂ ಮಾನವ ಜನಾಂಗದ ಕವಿಗಳು. ಅವರು ತಮ್ಮ ಬಾಳಿನುದ್ದಕ್ಕೂ ಅನುಭವಿಸಿದ್ದನ್ನು ಪ್ರಾಮಾಣಿಕವಾಗಿ ಕೀರ್ತನೆಗಳ ಮೂಲಕ ಹೇಳಿದ್ದಾರೆ. ಡಂಭಾಚಾರ, ಕಂದಾಚಾರ, ಅಪನಂಬಿಕೆಗಳು ಹೋಗಲಾಡಿಸುವ ಶಕ್ತಿಯುತವಾದ ಜೀವನಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.