ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಾತ್ಮಕ ಶಿಕ್ಷಣಕ್ಕೆ ಬೇಕು ಪರಿಶ್ರಮ: ಪ್ರಾಚಾರ್ಯ ಮಲ್ಲಿಕಾರ್ಜುನ ಚಲುವಾ

Last Updated 13 ನವೆಂಬರ್ 2021, 15:48 IST
ಅಕ್ಷರ ಗಾತ್ರ

ಬೀದರ್: ‘ಪರಿಶ್ರಮಪಟ್ಟರೆ ಮಾತ್ರ ಗುಣಾತ್ಮಕ ಶಿಕ್ಷಣ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ಓದುವ ಪ್ರವೃತ್ತಿಯನ್ನು ಬೆಳೆಸಿಕೊಂಡರೆ ಸಾಧನೆ ಕಷ್ಟವಾಗಲಾರದು’ ಎಂದು ಕರ್ನಾಟಕ ಪದವಿ ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ಚಲುವಾ ಹೇಳಿದರು.

ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಬಿಎ, ಬಿಕಾಂ, ಬಿಎಸ್‌ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಪಾಲಕರ ಸಭೆ ಹಾಗೂ ನೂತನ ಶಿಕ್ಷಣ ನೀತಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಗುಂಪುಗಾರಿಕೆ, ಕಾಲಹರಣ, ಕ್ಯಾಂಟಿನ್‍ನಲ್ಲಿ ಹೆಚ್ಚು ಸಮಯ ಕಳೆಯುವುದು ಸರಿಯಲ್ಲ. ಕಾಲೇಜಿನ ಉಪನ್ಯಾಸಕರ ವಾಟ್ಸ್‌ಅಪ್ ಗ್ರೂಪ್‍ಗೆ ಸರಿಯಾಗಿ ಸ್ಪಂದಿಸುವ ಮೂಲಕ ಶಿಕ್ಷಣ ಪಡೆಯಬೇಕು. ನೂತನ ಶಿಕ್ಷಣ ನೀತಿ ಜಾರಿಯಾಗಿದ್ದರಿಂದ ಕೆಲ ಬದಲಾವಣೆಗಳಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವೂ ಆಗಿದೆ’ ಎಂದರು.

ಉಪ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ, ಡಾ.ಸೋಮನಾಥ ಮುದ್ದಾ, ರೇಣುಕಾ ಭಗವತಿ, ಡಿ.ಬಿ.ಕಂಬಾರ, ಬಸವರಾಜ ಕೊಡಂಬಲ್, ಸುನೀಲಕುಮಾರ ಮೂಲಗೆ, ಅಶ್ವಿನ್ ಚವ್ಹಾಣ, ಪ್ರಭಾ ಏಕಲಾರಕರ್, ರಾಜೇಂದ್ರ ಬಿರಾದಾರ, ರಾಜಮೋಹನ್ ಮಾತನಾಡಿದರು.

ಶ್ರೀಕಾಂತ ದೊಡ್ಮನಿ ಸ್ವಾಗತಿಸಿದರು. ಗೌರಿಪ್ರಿಯಾ ನಿರೂಪಿಸಿದರು. ರವಿಚಂದ್ರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT