ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಭರವಸೆ

Last Updated 1 ಸೆಪ್ಟೆಂಬರ್ 2020, 15:07 IST
ಅಕ್ಷರ ಗಾತ್ರ

ಬೀದರ್: ಕೇಂದ್ರದಿಂದ ಅನುಮತಿ ದೊರೆತ ಕೂಡಲೇ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸಚಿವರನ್ನು ಭೇಟಿ ಮಾಡಿ ಖರೀದಿ ಕೇಂದ್ರದ ಕುರಿತು ಚರ್ಚಿಸಲಾಗಿದೆ. ಈಗಾಗಲೇ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಖರೀದಿ ಕೇಂದ್ರ ಶುರು ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಲ್ಲೇ ಮಾರಾಟ ಮಾಡುವ ಮೂಲಕ ಕನಿಷ್ಠ ಬೆಂಬಲ ಬೆಲೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ದಿಸೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಕನಿಷ್ಠ ಬೆಂಬಲ ಬೆಲೆಯೂ ಸೇರಿದೆ. ಈಗಾಗಲೇ ಜಿಲ್ಲೆಯ ಲಕ್ಷಾಂತರ ರೈತರು ಇದರ ಲಾಭ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT