<p><strong>ಗೋರನಳ್ಳಿ (ಜನವಾಡ):</strong> ‘ನಾಯಿ ಕಚ್ಚಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಕೂಡಲೇ ರೇಬಿಸ್ ರೋಗ ನಿರೋಧಕ ಚುಚ್ಚು ಮದ್ದು ಪಡೆಯಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಮುದ್ರ ಕುಲಕರ್ಣಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಬಿಸ್ ರೋಗವು ಸೋಂಕಿತ ಪ್ರಾಣಿಯಿಂದ ಮನುಷ್ಯನಿಗೆ ಹರಡುತ್ತದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕ ಯೋಗೇಂದ್ರ ಕುಲಕರ್ಣಿ ಹಾಗೂ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ರೇಬಿಸ್ ರೋಗದ ಲಕ್ಷಣ ಹಾಗೂ ಲಸಿಕೆ ಕುರಿತು ಮಾತನಾಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಸವರಾಜ ಮುಚಳಂಬೆ, ಪ್ರಾಚಾರ್ಯೆ ವಿನಿತಾ ಪಾಟೀಲ, ಪ್ರೊ.ಸಂದೀಪ್ ಮಾಶೆಟ್ಟಿ ಇದ್ದರು.</p>.<p>ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರನಳ್ಳಿ (ಜನವಾಡ):</strong> ‘ನಾಯಿ ಕಚ್ಚಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು. ಕೂಡಲೇ ರೇಬಿಸ್ ರೋಗ ನಿರೋಧಕ ಚುಚ್ಚು ಮದ್ದು ಪಡೆಯಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಮುದ್ರ ಕುಲಕರ್ಣಿ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಬಿಸ್ ರೋಗವು ಸೋಂಕಿತ ಪ್ರಾಣಿಯಿಂದ ಮನುಷ್ಯನಿಗೆ ಹರಡುತ್ತದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕ ಯೋಗೇಂದ್ರ ಕುಲಕರ್ಣಿ ಹಾಗೂ ಕಾಲೇಜು ನಿರ್ದೇಶಕಿ ಉಮಾ ದೇಶಮುಖ ರೇಬಿಸ್ ರೋಗದ ಲಕ್ಷಣ ಹಾಗೂ ಲಸಿಕೆ ಕುರಿತು ಮಾತನಾಡಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಸವರಾಜ ಮುಚಳಂಬೆ, ಪ್ರಾಚಾರ್ಯೆ ವಿನಿತಾ ಪಾಟೀಲ, ಪ್ರೊ.ಸಂದೀಪ್ ಮಾಶೆಟ್ಟಿ ಇದ್ದರು.</p>.<p>ಎನ್.ಎಸ್.ಎಸ್. ಅಧಿಕಾರಿ ಬಸವಲಿಂಗ ಸ್ವಾಮಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>