ಬೆಳಿಗ್ಗೆ ಧ್ವಜಾರೋಹಣದ ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಹಾಗೂ ರಾಘವೇಂದ್ರ ಸ್ವಾಮಿ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಆರಾಧನಾ ಮಹೋತ್ಸವ ಪ್ರಯುಕ್ತ ರಾಯರ ವೃಂದಾವನಕ್ಕೆ ಹಣ್ಣಿನ ವಿಶೇಷ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ ಮಾಡಿ ಭಕ್ತಿ ಸಮರ್ಪಣೆ ಮಾಡಲಾಯಿತು.
ಶನಿವಾರ ಬೆಳಿಗ್ಗೆ 5 ಗಂಟೆಗೆ ಸುಪ್ರಭಾತ, ವಿಷ್ಣು ಸಹಸ್ರ ನಾಮ, ರಾಯರ ಅಷ್ಟೋತ್ತರ ಪಾರಾಯಣ, ಕ್ಷೀರಾಭಿಷೇಕ , ಪಂಚಾಮೃತ ಅಭಿಷೇಕ ಮತ್ತಿತರ ಕಾರ್ಯಗಳು ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ರಥೋತ್ಸವ ಜರುಗಲಿದೆ. ಸಂಜೆ 6 ಗಂಟೆಗೆ ಗಾಯಕಿ ಮಹಾಲಕ್ಷ್ಮಿ ಶೆಣೈ ದಾಸಲಹರಿ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು.