<p><strong>ಬೀದರ್:</strong> ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಶನಿವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.</p>.ಬೀದರ್ | ಅತಿವೃಷ್ಟಿ ಹಾನಿ; ಸಿಎಂ ಪರಿಹಾರದ ಭರವಸೆ.<p>ತಾಲ್ಲೂಕಿನ ಜನವಾಡ, ಹಿಪ್ಪಳಗಾಂವ್, ಚಾಂಬೋಳ ಗ್ರಾಮ ಮತ್ತು ಸೇತುವೆ, ಕನಳ್ಳಿ, ಶ್ರೀಮಂಡಲ, ಕಂಗಟಿ, ಬಸಂತಪುರ, ಚಿಮಕೋಡ್, ಫತೇಪೂರ, ಖಾಜಾಪೂರ ಗ್ರಾಮಗಳಿಗೆ ಭೇಟಿ ಕೊಟ್ಟು ಪರಿಸ್ಥಿತಿಯ ಅವಲೋಕನ ನಡೆಸಿದರು. ಸ್ಥಳೀಯ ರೈತರ ಸಮಸ್ಯೆ ಆಲಿಸಿದರು.</p><p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಸರು, ಉದ್ದು ಸೋಯಾಬೀನ್, ತೊಗರಿ ಸಂಪೂರ್ಣವಾಗಿ ನಾಶವಾಗಿದೆ. ವಿವಿಧ ಕಡೆಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಹಾನಿಯ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದ್ದು, ವರದಿ ಬಂದ ನಂತರ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. </p>.ಸತತ ಮಳೆಗೆ ಕುಸಿದು ಬಿದ್ದ ಬೀದರ್ ಕೋಟೆ ಗೋಡೆ.<p>ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದರು.</p><p>ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಬೀದರ್ ತಹಶೀಲ್ದಾರ್ ರವೀಂದ್ರ ದಾಮಾ, ಕೃಷಿ ಇಲಾಖೆ ಉಪನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.</p> .ಬೀದರ್ | ವಾರದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ವಿತರಣೆ: ಸಚಿವ ರಹೀಂ ಖಾನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಶನಿವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.</p>.ಬೀದರ್ | ಅತಿವೃಷ್ಟಿ ಹಾನಿ; ಸಿಎಂ ಪರಿಹಾರದ ಭರವಸೆ.<p>ತಾಲ್ಲೂಕಿನ ಜನವಾಡ, ಹಿಪ್ಪಳಗಾಂವ್, ಚಾಂಬೋಳ ಗ್ರಾಮ ಮತ್ತು ಸೇತುವೆ, ಕನಳ್ಳಿ, ಶ್ರೀಮಂಡಲ, ಕಂಗಟಿ, ಬಸಂತಪುರ, ಚಿಮಕೋಡ್, ಫತೇಪೂರ, ಖಾಜಾಪೂರ ಗ್ರಾಮಗಳಿಗೆ ಭೇಟಿ ಕೊಟ್ಟು ಪರಿಸ್ಥಿತಿಯ ಅವಲೋಕನ ನಡೆಸಿದರು. ಸ್ಥಳೀಯ ರೈತರ ಸಮಸ್ಯೆ ಆಲಿಸಿದರು.</p><p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಸರು, ಉದ್ದು ಸೋಯಾಬೀನ್, ತೊಗರಿ ಸಂಪೂರ್ಣವಾಗಿ ನಾಶವಾಗಿದೆ. ವಿವಿಧ ಕಡೆಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಹಾನಿಯ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದ್ದು, ವರದಿ ಬಂದ ನಂತರ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. </p>.ಸತತ ಮಳೆಗೆ ಕುಸಿದು ಬಿದ್ದ ಬೀದರ್ ಕೋಟೆ ಗೋಡೆ.<p>ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದರು.</p><p>ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಬೀದರ್ ತಹಶೀಲ್ದಾರ್ ರವೀಂದ್ರ ದಾಮಾ, ಕೃಷಿ ಇಲಾಖೆ ಉಪನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.</p> .ಬೀದರ್ | ವಾರದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ವಿತರಣೆ: ಸಚಿವ ರಹೀಂ ಖಾನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>