ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲ್ವೆ ಅಂಡರ್‌ಬ್ರಿಡ್ಜ್‌ ₹7.65 ಕೋಟಿ ಮಂಜೂರು: ಕೇಂದ್ರ ಸಚಿವ ಭಗವಂತ ಖೂಬಾ

Published 12 ಮಾರ್ಚ್ 2024, 16:26 IST
Last Updated 12 ಮಾರ್ಚ್ 2024, 16:26 IST
ಅಕ್ಷರ ಗಾತ್ರ

ಬೀದರ್‌: ‘ತೆಲಂಗಾಣ ಗಡಿಭಾಗದ ಜಹೀರಾಬಾದ್‌ ಸಮೀಪದ ಮೆಟಲ್‌ಕುಂಟಾ ರೈಲು ನಿಲ್ದಾಣ ಸಮೀಪ ರೈಲ್ವೆ ಅಂಡರ್‌ಬ್ರಿಡ್ಜ್‌ ನಿರ್ಮಾಣಕ್ಕೆ ₹7.65 ಕೋಟಿ ಮಂಜೂರಾಗಿದೆ’ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಇದರೊಂದಿಗೆ ಮೂರು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಈ ಅಂಡರ್‌ಬ್ರಿಡ್ಜ್‌ ನಿರ್ಮಾಣದಿಂದ ಬೀದರ್‌ ದಕ್ಷಿಣ ಕ್ಷೇತ್ರದ ಮನ್ನಳ್ಳಿ, ಬರೂರ, ಭಂಗೂರ, ಸಿಂದೋಲ್, ರಾಜಗೀರ, ಹೊಕ್ರಾಣ (ಕೆ), ಹೊಕ್ರಾಣ (ಬಿ), ಧರ್ಮಾಪೂರ, ಚಿಂತಲಗೇರಾ, ನಾಗೋರಾ, ಯಾಕತಪೂರ, ಸಾತೋಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಹೀರಾಬಾದ್‌ ಹಾಗೂ ಮೆಟಲ್‌ಕುಂಟಾ ರೈಲು ನಿಲ್ದಾಣಕ್ಕೆ ಹೋಗಬೇಕಾದರೆ ಜನ ರೈಲ್ವೆ ಹಳಿ ದಾಟಿಕೊಂಡು ಹೋಗಬೇಕಾದ ಪರಿಸ್ಥಿತಿ ಇತ್ತು. ಲಾರಿ, ಟ್ರ್ಯಾಕ್ಟರ್‌, ಚಕ್ಕಡಿ ಸಂಚರಿಸಲು ತೊಂದರೆ ಉಂಟಾಗುತ್ತಿತ್ತು. 15 ಕಿ.ಮೀ ಸುತ್ತಿ ಬಳಸಿ ಹೋಗಬೇಕಿತ್ತು. ಈಗ ಅದು ತಪ್ಪಿದಂತಾಗುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT