<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಕೊಹಿನೂರ ಹೋಬಳಿಯಲ್ಲಿನ ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಕ್ಕೆ ಸಹಾಯಕ ಕೃಷಿ ನಿರ್ದೇಶಕ ಗೌತಮ ಮತ್ತಿತರರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಲಾಡವಂತಿ, ಲಾಡವಂತಿವಾಡಿ ಮತ್ತು ಪಹಾಡ ವ್ಯಾಪ್ತಿಯಲ್ಲಿನ ಹಾನಿಗೊಳಗಾದ ಹೊಲಗಳಿಗೆ ಭೇಟಿ ನೀಡಲಾಗಿದೆ. ನಾಲೆ ಪಕ್ಕದ ಜಮೀನುಗಳಲ್ಲಿ ನೀರು ನುಗ್ಗಿ ಹಾನಿ ಆಗಿದೆ. ಇನ್ನೂ ಸಮೀಕ್ಷಾ ಕಾರ್ಯ ಪೂರ್ಣಗೊಂಡಿಲ್ಲ’ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.</p>.<p>ಅಧಿಕಾರಿಗಳು ಬಾರದೆ ಬೇಸರ: ಕೊಹಿನೂರ ವಾಡಿ ವ್ಯಾಪ್ತಿಯಲ್ಲೂ ಹಳ್ಳದ ನೀರು ಹೊಲಗಳಲ್ಲಿ ನುಗ್ಗಿದ್ದರಿಂದ ಸಾಕಷ್ಟು ಬೆಳೆ ಕೊಚ್ಚಿಕೊಂಡು ಹೋಗಿ ಹಲವಾರು ಜನರಿಗೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸುವುದಕ್ಕಾಗಿ ಅಧಿಕಾರಿಗಳು ಬರುತ್ತಿದ್ದಾರೆಂದು ಗ್ರಾಮ ಸಹಾಯಕರು ಹೇಳಿದ್ದರಿಂದ ರೈತರು ಸಂಜೆವರೆಗೆ ಹೊಲಗಳಲ್ಲಿಯೇ ಇದ್ದರೂ ಯಾರೂ ಬರಲಿಲ್ಲ ಎಂದು ಗ್ರಾಮದ ರೈತ ಮಧುಕರ ಘೋಡಕೆ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮದ ಸರ್ವೇ ನಂಬರ್ 112ರಿಂದ ಸರ್ವೇ ನಂಬರ್ 117 ರವರೆಗೆ ಅನೇಕ ರೈತರ ಹೊಲಗಳಲ್ಲಿ ನೀರು ಸಂಗ್ರಹಗೊಂಡಿದೆ. ಬೆಳೆ ಮತ್ತು ಮಣ್ಣು ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಶೀಘ್ರ ಪರಿಶೀಲಿಸಿ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ತಾಲ್ಲೂಕಿನ ಕೊಹಿನೂರ ಹೋಬಳಿಯಲ್ಲಿನ ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಕ್ಕೆ ಸಹಾಯಕ ಕೃಷಿ ನಿರ್ದೇಶಕ ಗೌತಮ ಮತ್ತಿತರರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಲಾಡವಂತಿ, ಲಾಡವಂತಿವಾಡಿ ಮತ್ತು ಪಹಾಡ ವ್ಯಾಪ್ತಿಯಲ್ಲಿನ ಹಾನಿಗೊಳಗಾದ ಹೊಲಗಳಿಗೆ ಭೇಟಿ ನೀಡಲಾಗಿದೆ. ನಾಲೆ ಪಕ್ಕದ ಜಮೀನುಗಳಲ್ಲಿ ನೀರು ನುಗ್ಗಿ ಹಾನಿ ಆಗಿದೆ. ಇನ್ನೂ ಸಮೀಕ್ಷಾ ಕಾರ್ಯ ಪೂರ್ಣಗೊಂಡಿಲ್ಲ’ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.</p>.<p>ಅಧಿಕಾರಿಗಳು ಬಾರದೆ ಬೇಸರ: ಕೊಹಿನೂರ ವಾಡಿ ವ್ಯಾಪ್ತಿಯಲ್ಲೂ ಹಳ್ಳದ ನೀರು ಹೊಲಗಳಲ್ಲಿ ನುಗ್ಗಿದ್ದರಿಂದ ಸಾಕಷ್ಟು ಬೆಳೆ ಕೊಚ್ಚಿಕೊಂಡು ಹೋಗಿ ಹಲವಾರು ಜನರಿಗೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ನಡೆಸುವುದಕ್ಕಾಗಿ ಅಧಿಕಾರಿಗಳು ಬರುತ್ತಿದ್ದಾರೆಂದು ಗ್ರಾಮ ಸಹಾಯಕರು ಹೇಳಿದ್ದರಿಂದ ರೈತರು ಸಂಜೆವರೆಗೆ ಹೊಲಗಳಲ್ಲಿಯೇ ಇದ್ದರೂ ಯಾರೂ ಬರಲಿಲ್ಲ ಎಂದು ಗ್ರಾಮದ ರೈತ ಮಧುಕರ ಘೋಡಕೆ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮದ ಸರ್ವೇ ನಂಬರ್ 112ರಿಂದ ಸರ್ವೇ ನಂಬರ್ 117 ರವರೆಗೆ ಅನೇಕ ರೈತರ ಹೊಲಗಳಲ್ಲಿ ನೀರು ಸಂಗ್ರಹಗೊಂಡಿದೆ. ಬೆಳೆ ಮತ್ತು ಮಣ್ಣು ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಶೀಘ್ರ ಪರಿಶೀಲಿಸಿ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>