<p><strong>ಬೀದರ್</strong>: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಭಾನುವಾರ ಮತ್ತೆ ಆರ್ಭಟಿಸಿದ್ದಾನೆ.</p>.<p>ಭಾನುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ಇತ್ತು. ಮಧ್ಯಾಹ್ನದ ನಂತರ ಕಾರ್ಮೋಡ ಆವರಿಸಿಕೊಂಡು ಸಂಜೆ ಬಿರುಸಿನ ವರ್ಷಧಾರೆಯಾಯಿತು.</p>.<p>ಜಿಲ್ಲೆಯ ಬೀದರ್, ಹುಮನಾಬಾದ್ ತಾಲ್ಲೂಕಿನ ಬಹುತೇಕ ಕಡೆ ಉತ್ತಮ ವರ್ಷಧಾರೆಯಾಗಿದೆ. ಚಿಟಗುಪ್ಪ, ಬಸವಕಲ್ಯಾಣ, ಭಾಲ್ಕಿಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ವರ್ಷಧಾರೆಗೆ ಬೀದರ್ ನಗರದ ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ರೈಲ್ವೆ ಅಂಡರಪಾಸ್, ಕೆಇಬಿ ರಸ್ತೆ, ವಿದ್ಯಾನಗರದ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡು, ಸಂಚಾರ ಅಸ್ತವ್ಯಸ್ತಗೊಂಡಿತು. ಕೆಇಬಿಯಲ್ಲಿ ಮರವೊಂದು ಧರೆಗುರುಳಿ ಕಾರಿನ ಮೇಲೆ ಬಿದ್ದಿದ್ದರಿಂದ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ಮಳೆ ಬಿದ್ದಿದೆ.</p>.<p>ಜೂನ್ ಮೊದಲ ವಾರ ಜಿಲ್ಲೆಯಾದ್ಯಂತ ಉತ್ತಮ ರೀತಿಯಲ್ಲಿ ಮಳೆಯಾಗಿತ್ತು. ಅನಂತರ ಬಿತ್ತನೆ ಕಾರ್ಯ ನಡೆದಿತ್ತು. ಎರಡನೇ ಹಾಗೂ ಮೂರನೇ ವಾರ ಹೇಳಿಕೊಳ್ಳುವಂತಹ ಮಳೆಯಾಗಿರಲಿಲ್ಲ. ಇದರಿಂದಾಗಿ ರೈತರು ಚಿಂತಕ್ರಾಂತರಾಗಿದ್ದರು. ಭಾನುವಾರ ಸುರಿದ ಮಳೆಗೆ ರೈತರು ಸಂತಸಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಭಾನುವಾರ ಮತ್ತೆ ಆರ್ಭಟಿಸಿದ್ದಾನೆ.</p>.<p>ಭಾನುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ಇತ್ತು. ಮಧ್ಯಾಹ್ನದ ನಂತರ ಕಾರ್ಮೋಡ ಆವರಿಸಿಕೊಂಡು ಸಂಜೆ ಬಿರುಸಿನ ವರ್ಷಧಾರೆಯಾಯಿತು.</p>.<p>ಜಿಲ್ಲೆಯ ಬೀದರ್, ಹುಮನಾಬಾದ್ ತಾಲ್ಲೂಕಿನ ಬಹುತೇಕ ಕಡೆ ಉತ್ತಮ ವರ್ಷಧಾರೆಯಾಗಿದೆ. ಚಿಟಗುಪ್ಪ, ಬಸವಕಲ್ಯಾಣ, ಭಾಲ್ಕಿಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.</p>.<p>ವರ್ಷಧಾರೆಗೆ ಬೀದರ್ ನಗರದ ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ರೈಲ್ವೆ ಅಂಡರಪಾಸ್, ಕೆಇಬಿ ರಸ್ತೆ, ವಿದ್ಯಾನಗರದ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡು, ಸಂಚಾರ ಅಸ್ತವ್ಯಸ್ತಗೊಂಡಿತು. ಕೆಇಬಿಯಲ್ಲಿ ಮರವೊಂದು ಧರೆಗುರುಳಿ ಕಾರಿನ ಮೇಲೆ ಬಿದ್ದಿದ್ದರಿಂದ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ಮಳೆ ಬಿದ್ದಿದೆ.</p>.<p>ಜೂನ್ ಮೊದಲ ವಾರ ಜಿಲ್ಲೆಯಾದ್ಯಂತ ಉತ್ತಮ ರೀತಿಯಲ್ಲಿ ಮಳೆಯಾಗಿತ್ತು. ಅನಂತರ ಬಿತ್ತನೆ ಕಾರ್ಯ ನಡೆದಿತ್ತು. ಎರಡನೇ ಹಾಗೂ ಮೂರನೇ ವಾರ ಹೇಳಿಕೊಳ್ಳುವಂತಹ ಮಳೆಯಾಗಿರಲಿಲ್ಲ. ಇದರಿಂದಾಗಿ ರೈತರು ಚಿಂತಕ್ರಾಂತರಾಗಿದ್ದರು. ಭಾನುವಾರ ಸುರಿದ ಮಳೆಗೆ ರೈತರು ಸಂತಸಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>