ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಧಾರಾಕಾರ ಮಳೆ

Last Updated 10 ಜುಲೈ 2021, 4:06 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ.

ಔರಾದ್ ತಾಲ್ಲೂಕಿನ ಖಾಶೆಂಪುರ ನಾಗೂರ ನಡುವಿನ ಹಳ್ಳದ ಸೇತುವೆ ಮೇಲಿಂದ ನೀರು ಹರಿಯುತ್ತಿದೆ. ವಡಗಾಂವ- ಕಂದುಗೂಳ ನಡುವಿನ ಸೇತುವೆ ಮುಳುಗಡೆಯಾಗಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಹಳ್ಳ ಕೊಳ್ಳ ಗಳು ಉಕ್ಕಿ ಹರಿದು ನೀರು ಹೊಲಗಳಿಗೆ ನುಗ್ಗಿದೆ. ಬೋರಗಿ ಗ್ರಾಮದಲ್ಲಿ ಗಟಾರುಗಳು‌ಉಕ್ಕಿ ಹರಿದು ನೀರು ಮನೆಗಳಿಗೆ ನುಗ್ಗಿದೆ.

ಹುಮನಾಬಾದ್‌ನಲ್ಲೂ ಮಳೆಯಾ ಗಿದ್ದು, ಚರಂಡಿ ತುಂಬಿ ನೀರು ರಸ್ತೆಗಳ ಮೇಲೆ ಹರಿಯಿತು. ಹೈದರಾಬಾದ್- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಮಳೆ ಅಬ್ಬರಿಸಿ ರಸ್ತೆ ಮಳೆ ಅಪಾರ ಪ್ರಮಾಣದಲ್ಲಿ ನೀರು ಹರಿದ ಕಾರಣ ಸವಾರರು ರಸ್ತೆ ಕಾಣದೆ ವಾಹನಗಳು ನಿಧಾನವಾಗಿ ಸಾಗಿದವು.

ಬೀದರ್, ಭಾಲ್ಕಿ, ಖಟಕ ಚಿಂಚೋಳಿ, ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT