ಬೀದರ್: ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶನಿವಾರ ಸಂಜೆ ಮಳೆ ಅಬ್ಬರಿಸಿದೆ. ಚಿಟಗುಪ್ಪ, ಬೀದರ್, ಹುಮನಾಬಾದ್ ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ ಮಳೆಯಾಗಿದೆ.
ಬೆಳಿಗ್ಗೆಯಿಂದ ಬಿಸಿಲು ಮಿಶ್ರಿತ ಮೋಡ ಕವಿದ ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಮಳೆ ಸುರಿದಿದೆ. ಚಿಟಗುಪ್ಪದಲ್ಲಿ ಜೋರಾಗಿ ಸುರಿದ ಮಳೆಗೆ ಗಟಾರುಗಳು ಉಕ್ಕಿ ಹರಿದವು. ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಬೀದರ್ ನಗರದಲ್ಲಿ ಮಳೆ ಅಬ್ಬರಿಸಿದರೆ, ಗ್ರಾಮೀಣ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.ಜಿಲ್ಲೆಯ ಇನ್ನುಳಿದ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿಯಲ್ಲಿ 64.5 ಮಿ.ಮೀ. ಮಳೆ ದಾಖಲಾಗಿದೆ.