<p><strong>ಬೀದರ್:</strong> ಜಿಲ್ಲೆಯ ಹಲವು ಭಾಗಗಳಲ್ಲಿ ಸೋಮವಾರ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ. </p> <p>ಸಿಡಿಲಿಗೆ ಭಾಲ್ಕಿ ತಾಲ್ಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಸೋಮವಾರ ಸಂಜೆ ರೈತ ಸುನಿಲ್ ವಿಜಯಕುಮಾರ ಮಗರೆ (32) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. </p><p>ಹುಮನಾಬಾದ್ ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಸಿಡಿಲಿಗೆ ಕಾರ್ಮಿಕ ಚಂದ್ರಕಾಂತ (22) ಮೃತಪಟ್ಟಿದ್ದಾರೆ. ಮೃತ ಚಂದ್ರಕಾಂತ ಅವರು ಚಿಟಗುಪ್ಪ ತಾಲ್ಲೂಕಿನ ಬೇಳಕೇರಾ ಗ್ರಾಮದ ನಿವಾಸಿಯಾಗಿದ್ದರು. ಕೂಲಿ ಕೆಲಸ ಮಾಡುವುದಕ್ಕಾಗಿ ಧುಮ್ಮನಸೂರ್ ಗ್ರಾಮಕ್ಕೆ ಬಂದಿದ್ದರು. ಇವರ ಜೊತೆಗೆ ಕೆಲಸ ಮಾಡುತ್ತಿದ್ದ ಬಸಮ್ಮ ಹಾಗೂ ಶಕುಂತಲಾ ಎಂಬುವವರಿಗೂ ಸಿಡಿಲಿನಿಂದ ಗಾಯಗಳಾಗಿವೆ.</p>. <p>ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್, ಹುಮನಾಬಾದ್, ಹುಲಸೂರ ತಾಲ್ಲೂಕಿನಲ್ಲಿ ಬಿರುಗಾಳಿಯೊಂದಿಗೆ ಬಿರುಸಿನ ಮಳೆಯಾಗಿದೆ. ಮಳೆಯಿಂದ ವಾತಾವರಣ ತಂಪಾಗಿದೆ. ಇನ್ನು, ಸಂಜೆ ಪುನಃ ಶುರುವಾದ ಧಾರಾಕಾರ ಮಳೆ ರಾತ್ರಿ ವರೆಗೂ ಮುಂದುವರೆದಿತ್ತು<strong>.</strong></p>.ವಿಜಯಪುರ | ಮಳೆ, ಗಾಳಿ: ಹಾರಿಹೋದ ಚಾವಣಿ, ಸಿಡಿಲು ಬಡಿದು ಎಮ್ಮೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ಹಲವು ಭಾಗಗಳಲ್ಲಿ ಸೋಮವಾರ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ. </p> <p>ಸಿಡಿಲಿಗೆ ಭಾಲ್ಕಿ ತಾಲ್ಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಸೋಮವಾರ ಸಂಜೆ ರೈತ ಸುನಿಲ್ ವಿಜಯಕುಮಾರ ಮಗರೆ (32) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. </p><p>ಹುಮನಾಬಾದ್ ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಸಿಡಿಲಿಗೆ ಕಾರ್ಮಿಕ ಚಂದ್ರಕಾಂತ (22) ಮೃತಪಟ್ಟಿದ್ದಾರೆ. ಮೃತ ಚಂದ್ರಕಾಂತ ಅವರು ಚಿಟಗುಪ್ಪ ತಾಲ್ಲೂಕಿನ ಬೇಳಕೇರಾ ಗ್ರಾಮದ ನಿವಾಸಿಯಾಗಿದ್ದರು. ಕೂಲಿ ಕೆಲಸ ಮಾಡುವುದಕ್ಕಾಗಿ ಧುಮ್ಮನಸೂರ್ ಗ್ರಾಮಕ್ಕೆ ಬಂದಿದ್ದರು. ಇವರ ಜೊತೆಗೆ ಕೆಲಸ ಮಾಡುತ್ತಿದ್ದ ಬಸಮ್ಮ ಹಾಗೂ ಶಕುಂತಲಾ ಎಂಬುವವರಿಗೂ ಸಿಡಿಲಿನಿಂದ ಗಾಯಗಳಾಗಿವೆ.</p>. <p>ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್, ಹುಮನಾಬಾದ್, ಹುಲಸೂರ ತಾಲ್ಲೂಕಿನಲ್ಲಿ ಬಿರುಗಾಳಿಯೊಂದಿಗೆ ಬಿರುಸಿನ ಮಳೆಯಾಗಿದೆ. ಮಳೆಯಿಂದ ವಾತಾವರಣ ತಂಪಾಗಿದೆ. ಇನ್ನು, ಸಂಜೆ ಪುನಃ ಶುರುವಾದ ಧಾರಾಕಾರ ಮಳೆ ರಾತ್ರಿ ವರೆಗೂ ಮುಂದುವರೆದಿತ್ತು<strong>.</strong></p>.ವಿಜಯಪುರ | ಮಳೆ, ಗಾಳಿ: ಹಾರಿಹೋದ ಚಾವಣಿ, ಸಿಡಿಲು ಬಡಿದು ಎಮ್ಮೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>