‘ಗ್ರಾಮದ ಓಣಿಯಲ್ಲಿ ವಾಸಿಸುವ ತುಳಸಿರಾಮ ಹಾಗೂ ಪಾಂಡುರಂಗ ಅವರಿಗೆ ವಯಸ್ಸಾಗಿದ್ದು, ತಮ್ಮ ಪತ್ನಿಯರೊಂದಿಗೆ ಜಿವನ ನಡೆಸುತ್ತಿದ್ದಾರೆ. ಮಳೆಯ ನೀರು ಮನೆಗೆ ನುಗ್ಗಿದ ಪರಿಣಾಮ ರಾತ್ರಿಯಿಡಿ ಪಾತ್ರೆಯ ಮೂಲಕ ನೀರನ್ನು ಹೊರಹಾಕಲು ಪ್ರಯತ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಭಾರಿ ಪ್ರಯಾಣದಲ್ಲಿ ನೀರು ನುಗ್ಗಿದ್ದರಿಂದ ಸಂಪೂರ್ಣ ಹೊರಹಾಕಲು ಸಾಧ್ಯವಾಗುವುದಿಲ್ಲ. ಮಳೆಗಾಲದ ಪೂರ್ವಸಿದ್ಧತೆಯಲ್ಲಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಹಾಗೂ ಜೆಜೆಎಂ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ’ ಎಂದು ಗ್ರಾಮಸ್ಥ ಗಣೇಶ್ ಆರೋಪಿಸಿದ್ದಾರೆ.