ಬೀದರ್: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಕಮಲನಗರ ತಾಲ್ಲೂಕಿನ ಭಂಡಾರ ಕುಮಟಾ, ಡೊಂಗರಗಾವ್ ಗ್ರಾಮದ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿ ಬೆಳೆ ಸಂಪೂರ್ಣ ನೆಲಕ್ಕುರುಳಿದೆ.
ಬೀದರ್, ಭಾಲ್ಕಿ, ಔರಾದ್, ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಒಂದು ತಾಸು ಮಳೆ ಸುರಿದ ಕಾರಣ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು. ಅಲ್ಲಲ್ಲಿ ನೀರು ಸಂಗ್ರಹವಾಗಿ ವಾಹನಗಳ ಓಡಾಟ ಹಾಗೂ ಪಾದಚಾರಿಗಳ ಸಂಚರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು.