<p><strong>ಬೀದರ್</strong>: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದೆ.</p>.<p>ಬೀದರ್ ನಗರ, ಬೀದರ್ ತಾಲ್ಲೂಕು, ಹುಲಸೂರ, ಭಾಲ್ಕಿ, ಚಿಟಗುಪ್ಪ ಹಾಗೂ ಹುಮನಾಬಾದ್ನಲ್ಲಿ ಜೋರು ಮಳೆಯಾದರೆ, ಬಸವಕಲ್ಯಾಣ, ಔರಾದ್, ಕಮಲನಗರದಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಿದೆ.</p>.<p>ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗಳವಾರ ನಸುಕಿನ ಜಾವ ಐದರಿಂದ ಆರು ಗಂಟೆಯವರೆಗೆ ಬಿರುಸಿನ ವರ್ಷಧಾರೆಯಾಯಿತು. ಸಂಜೆಯವರೆಗೆ ಬಿಡುವು ಕೊಟ್ಟ ಮಳೆ ಪುನಃ ನಾಲ್ಕು ಗಂಟೆಗೆ ಆರಂಭಗೊಂಡು ಆರು ಗಂಟೆಯ ತನಕ ಗುಡುಗು ಸಹಿತ ಜೋರಾಗಿ ಸುರಿಯಿತು.</p>.<p>ನಗರದ ಮನ್ನಳ್ಳಿ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ತಹಶೀಲ್ದಾರ್ ಕಚೇರಿ ಸೇರಿ ಹಲವೆಡೆ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು.</p>.<p>ಶಾಲಾ, ಕಾಲೇಜು ಹಾಗೂ ದೈನಂದಿನ ಕೆಲಸ ಮುಗಿಸಿಕೊಂಡು ಮನೆ ಸೇರುವ ಹೊತ್ತಿನಲ್ಲಿ ಬಿರುಸಿನ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಕೂಡ ನಡೆಸಲು ಸಾಧ್ಯವಾಗಲಿಲ್ಲ. ಮುಖಂಡರು ಮನವಿ ಪತ್ರ ಕೊಟ್ಟು ನಿರ್ಗಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದೆ.</p>.<p>ಬೀದರ್ ನಗರ, ಬೀದರ್ ತಾಲ್ಲೂಕು, ಹುಲಸೂರ, ಭಾಲ್ಕಿ, ಚಿಟಗುಪ್ಪ ಹಾಗೂ ಹುಮನಾಬಾದ್ನಲ್ಲಿ ಜೋರು ಮಳೆಯಾದರೆ, ಬಸವಕಲ್ಯಾಣ, ಔರಾದ್, ಕಮಲನಗರದಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಿದೆ.</p>.<p>ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗಳವಾರ ನಸುಕಿನ ಜಾವ ಐದರಿಂದ ಆರು ಗಂಟೆಯವರೆಗೆ ಬಿರುಸಿನ ವರ್ಷಧಾರೆಯಾಯಿತು. ಸಂಜೆಯವರೆಗೆ ಬಿಡುವು ಕೊಟ್ಟ ಮಳೆ ಪುನಃ ನಾಲ್ಕು ಗಂಟೆಗೆ ಆರಂಭಗೊಂಡು ಆರು ಗಂಟೆಯ ತನಕ ಗುಡುಗು ಸಹಿತ ಜೋರಾಗಿ ಸುರಿಯಿತು.</p>.<p>ನಗರದ ಮನ್ನಳ್ಳಿ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ತಹಶೀಲ್ದಾರ್ ಕಚೇರಿ ಸೇರಿ ಹಲವೆಡೆ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು.</p>.<p>ಶಾಲಾ, ಕಾಲೇಜು ಹಾಗೂ ದೈನಂದಿನ ಕೆಲಸ ಮುಗಿಸಿಕೊಂಡು ಮನೆ ಸೇರುವ ಹೊತ್ತಿನಲ್ಲಿ ಬಿರುಸಿನ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಕೂಡ ನಡೆಸಲು ಸಾಧ್ಯವಾಗಲಿಲ್ಲ. ಮುಖಂಡರು ಮನವಿ ಪತ್ರ ಕೊಟ್ಟು ನಿರ್ಗಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>