<p><strong>ಬೀದರ್:</strong> ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹುಡಗಿ ಗ್ರಾಮದ ರೈತ ಗುರುಲಿಂಗಪ್ಪ ಮೇಲ್ದೊಡ್ಡಿ ಅವರು 2020–21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದ್ದಾರೆ.</p>.<p>ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಸರ್ಕಾರವು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಬಹು ಬೆಳೆ ಹಾಗೂ ದ್ವಿದಳ ಧಾನ್ಯ ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ.</p>.<p>‘ಹೊಲದಲ್ಲಿ ಉದ್ದು, ಹೆಸರು, ಜೋಳ, ಕವಳೆ, ನವಣೆ ಬೆಳೆದಿದ್ದೇನೆ. ತೋಟಗಾರಿಕೆ ಬೆಳೆಗಳಾದ ಬಾಳೆ, ಪಪ್ಪಾಯ, ಪೇರಲ, ಲಿಂಬೆ, ಹೂವು ಸಹ ಬೆಳೆದಿದ್ದೇನೆ. ಬಹು ಬೆಳೆ ಬೆಳೆದಿರುವ ಕಾರಣ ಯಾವುದರಲ್ಲೂ ಹಾನಿಯಾಗಿಲ್ಲ. ಎಲ್ಲ ಬೆಳೆಗಳಿಂದಲೂ ಆದಾಯ ಪಡೆದುಕೊಳ್ಳುತ್ತಿದ್ದೆನೆ’ ಎಂದು ಗುರುಲಿಂಗಪ್ಪ ತಿಳಿಸಿದ್ದಾರೆ.</p>.<p>ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಸ್ಪೀ) ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಸಲ್ಲಿಸಿದವರಿಗೆ ನೀಡುವ 2017ನೇ ಸಾಲಿನ ಎಲ್.ಎಂ.ಪಟೇಲ್ ಪ್ರಶಸ್ತಿ ಲಭಿಸಿದೆ. ಮುಂಬೈನಲ್ಲಿ 2017ರ ಡಿಸೆಂಬರ್ 30ರಂದು ಕೇಂದ್ರದ ತೋಟಗಾರಿಕೆ ಇಲಾಖೆಯ ನಿವೃತ್ತ ಆಯುಕ್ತ ಪ್ರೊ.ಕೆ.ಎಲ್.ಚಂದಾ ಪ್ರಶಸ್ತಿ ಪ್ರದಾನ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹುಡಗಿ ಗ್ರಾಮದ ರೈತ ಗುರುಲಿಂಗಪ್ಪ ಮೇಲ್ದೊಡ್ಡಿ ಅವರು 2020–21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದ್ದಾರೆ.</p>.<p>ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಸರ್ಕಾರವು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಬಹು ಬೆಳೆ ಹಾಗೂ ದ್ವಿದಳ ಧಾನ್ಯ ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ.</p>.<p>‘ಹೊಲದಲ್ಲಿ ಉದ್ದು, ಹೆಸರು, ಜೋಳ, ಕವಳೆ, ನವಣೆ ಬೆಳೆದಿದ್ದೇನೆ. ತೋಟಗಾರಿಕೆ ಬೆಳೆಗಳಾದ ಬಾಳೆ, ಪಪ್ಪಾಯ, ಪೇರಲ, ಲಿಂಬೆ, ಹೂವು ಸಹ ಬೆಳೆದಿದ್ದೇನೆ. ಬಹು ಬೆಳೆ ಬೆಳೆದಿರುವ ಕಾರಣ ಯಾವುದರಲ್ಲೂ ಹಾನಿಯಾಗಿಲ್ಲ. ಎಲ್ಲ ಬೆಳೆಗಳಿಂದಲೂ ಆದಾಯ ಪಡೆದುಕೊಳ್ಳುತ್ತಿದ್ದೆನೆ’ ಎಂದು ಗುರುಲಿಂಗಪ್ಪ ತಿಳಿಸಿದ್ದಾರೆ.</p>.<p>ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಸ್ಪೀ) ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಸಲ್ಲಿಸಿದವರಿಗೆ ನೀಡುವ 2017ನೇ ಸಾಲಿನ ಎಲ್.ಎಂ.ಪಟೇಲ್ ಪ್ರಶಸ್ತಿ ಲಭಿಸಿದೆ. ಮುಂಬೈನಲ್ಲಿ 2017ರ ಡಿಸೆಂಬರ್ 30ರಂದು ಕೇಂದ್ರದ ತೋಟಗಾರಿಕೆ ಇಲಾಖೆಯ ನಿವೃತ್ತ ಆಯುಕ್ತ ಪ್ರೊ.ಕೆ.ಎಲ್.ಚಂದಾ ಪ್ರಶಸ್ತಿ ಪ್ರದಾನ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>