ಇನ್ನೂ ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ದೇಶದ ಜನರಿಗೆ ತಪ್ಪು ಮಾಹಿತಿ ನೀಡಿ, ದೇಶದಲ್ಲಿ ಗಲಭೆ ಮಾಡಿಸಲಾಗುತ್ತಿದೆ. ಬೇರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದು ನೆಲೆಸಿರುವವರಿಗೆ ಈ ಕಾನೂನು ಅನ್ವಯವಾಗುತ್ತದೆ. ಭಾರತೀಯ ಮುಸ್ಲಿಮರು ಭಾರತೀಯ ಪೌರರು, ಅವರ ಪೌರತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ತಪ್ಪು ಮಾಹಿತಿಗಳಿಗೆ ಭಾರತೀಯ ಪ್ರಜೆಗಳು ಕಿವಿಕೊಡಬಾರದು ಎಂದು ಹೇಳಿದರು.