<p><strong>ಗಂಗಾವತಿ:</strong> ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯೆಯ ರಾಮಾಯಣ ಸರ್ಕ್ಯೂಟ್ನ ಅಧ್ಯಕ್ಷ ಡಾ.ರಾಮ್ ಅತ್ತುರ್ ಭಾನುವಾರ ಭೇಟಿ ನೀಡಿ, ಆಂಜನೇಯ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿ, ‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವ ಕಾರ್ಯಕ್ಕೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಶ್ರೀರಾಮನ ಭಕ್ತನಾಗಿರುವ ಹನುಮ ಹುಟ್ಟಿದ ಅಂಜನಾದ್ರಿ ಬೆಟ್ಟಕ್ಕೆ ಬಂದು, ಅಂಜನಾದೇವಿಗೆ ಹಾಗೂ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>ವಿಶ್ವ ಹಿಂದೂ ಪರಿಷತ್ನ ಅಂತರರಾಷ್ಟ್ರೀಯ ಕಾರ್ಯದರ್ಶಿ ಅಲೋಕ್ಕುಮಾರ ಮಾತನಾಡಿ,‘ರಾಮ ಮಂದಿರ ನಿರ್ಮಾಣ ವಿಳಂಬವಾಗುವುದಿಲ್ಲ. ಕೋರ್ಟ್ ಆದೇಶದಂತೆ ಟ್ರಸ್ಟ್ ರಚಿಸಿಕೊಂಡು ಮಂದಿರ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗುವುದು. ರಾಮ ನಡೆದಾಡಿದ ಎಲ್ಲ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು’ ಎಂದರು.</p>.<p>ಇನ್ನೂ ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ದೇಶದ ಜನರಿಗೆ ತಪ್ಪು ಮಾಹಿತಿ ನೀಡಿ, ದೇಶದಲ್ಲಿ ಗಲಭೆ ಮಾಡಿಸಲಾಗುತ್ತಿದೆ. ಬೇರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದು ನೆಲೆಸಿರುವವರಿಗೆ ಈ ಕಾನೂನು ಅನ್ವಯವಾಗುತ್ತದೆ. ಭಾರತೀಯ ಮುಸ್ಲಿಮರು ಭಾರತೀಯ ಪೌರರು, ಅವರ ಪೌರತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ತಪ್ಪು ಮಾಹಿತಿಗಳಿಗೆ ಭಾರತೀಯ ಪ್ರಜೆಗಳು ಕಿವಿಕೊಡಬಾರದು ಎಂದು ಹೇಳಿದರು.</p>.<p>ಶಾಸಕ ಪರಣ್ಣ ಮುನವಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್ ಹಾಗೂ ಬಿಜೆಪಿ ಮುಖಂಡ ಸಂತೋಷ ಕೆಲೋಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯೆಯ ರಾಮಾಯಣ ಸರ್ಕ್ಯೂಟ್ನ ಅಧ್ಯಕ್ಷ ಡಾ.ರಾಮ್ ಅತ್ತುರ್ ಭಾನುವಾರ ಭೇಟಿ ನೀಡಿ, ಆಂಜನೇಯ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿ, ‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವ ಕಾರ್ಯಕ್ಕೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಶ್ರೀರಾಮನ ಭಕ್ತನಾಗಿರುವ ಹನುಮ ಹುಟ್ಟಿದ ಅಂಜನಾದ್ರಿ ಬೆಟ್ಟಕ್ಕೆ ಬಂದು, ಅಂಜನಾದೇವಿಗೆ ಹಾಗೂ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>ವಿಶ್ವ ಹಿಂದೂ ಪರಿಷತ್ನ ಅಂತರರಾಷ್ಟ್ರೀಯ ಕಾರ್ಯದರ್ಶಿ ಅಲೋಕ್ಕುಮಾರ ಮಾತನಾಡಿ,‘ರಾಮ ಮಂದಿರ ನಿರ್ಮಾಣ ವಿಳಂಬವಾಗುವುದಿಲ್ಲ. ಕೋರ್ಟ್ ಆದೇಶದಂತೆ ಟ್ರಸ್ಟ್ ರಚಿಸಿಕೊಂಡು ಮಂದಿರ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗುವುದು. ರಾಮ ನಡೆದಾಡಿದ ಎಲ್ಲ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು’ ಎಂದರು.</p>.<p>ಇನ್ನೂ ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ದೇಶದ ಜನರಿಗೆ ತಪ್ಪು ಮಾಹಿತಿ ನೀಡಿ, ದೇಶದಲ್ಲಿ ಗಲಭೆ ಮಾಡಿಸಲಾಗುತ್ತಿದೆ. ಬೇರೆ ರಾಷ್ಟ್ರಗಳಿಂದ ಭಾರತಕ್ಕೆ ಬಂದು ನೆಲೆಸಿರುವವರಿಗೆ ಈ ಕಾನೂನು ಅನ್ವಯವಾಗುತ್ತದೆ. ಭಾರತೀಯ ಮುಸ್ಲಿಮರು ಭಾರತೀಯ ಪೌರರು, ಅವರ ಪೌರತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ತಪ್ಪು ಮಾಹಿತಿಗಳಿಗೆ ಭಾರತೀಯ ಪ್ರಜೆಗಳು ಕಿವಿಕೊಡಬಾರದು ಎಂದು ಹೇಳಿದರು.</p>.<p>ಶಾಸಕ ಪರಣ್ಣ ಮುನವಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ್ ಹಾಗೂ ಬಿಜೆಪಿ ಮುಖಂಡ ಸಂತೋಷ ಕೆಲೋಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>