ಸಂಜೆ ಇಫ್ತಾರ್ ಹಾಗೂ ಮಸೀದಿಗಳಲ್ಲಿ ಸಾಮೂಹಿಕ ಊಟದ ವ್ಯವಸ್ಥೆಯೂ ಇರುವುದಿಲ್ಲ. ಕರ್ನಾಟಕ ವಕ್ಫ್ ಬೋರ್ಡ್ ಸೂಚಿಸಿದ 14 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಮಾನವೀಯತೆ ನೆಲೆಯಲ್ಲಿ ನಡೆದುಕೊಳ್ಳುವ ಜತೆಗೆ ಬಡವರಿಗೆ ದಾನ ಕೊಡುವುದನ್ನು ಮುಂದುವರಿಸಬೇಕು. ಬಡವರ ಸಂಕಷ್ಟ ತೊಲಗಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.