<p>ಬೀದರ್: ಲೋಕ ಜನಶಕ್ತಿ ಪಕ್ಷದಿಂದ ನಗರದಲ್ಲಿ ಮಂಗಳವಾರ ಮಾಜಿ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ಅವರ 4ನೇ ಪುಣ್ಯತಿಥಿ ಕಾರ್ಯಕ್ರಮ ಆಚರಿಸಲಾಯಿತು.</p>.<p>ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ನಾಗಶೆಟ್ಟಿ ಪಾಟೀಲ ಸುಂಕನಾಳ ಮಾತನಾಡಿ, ಪಾಸ್ವಾನ್ ಅವರು ದೇಶ ಕಂಡ ಅಪರೂಪದ ಧೀಮಂತ ನಾಯಕರಾಗಿದ್ದರು. ದೀನ ದಲಿತರ, ನೋಂದ ಜನರ ಏಳಿಗೆಗಾಗಿ ಬದುಕು ಸವೆಸಿದ್ದರು. ಅಸಂಖ್ಯ ಬೆಂಬಲಿಗರನ್ನು ಹೊಂದಿದ್ದರು ಎಂದು ಹೇಳಿದರು.</p>.<p>ಸಾಹಿತಿ ರಮೇಶ ಬಿರಾದಾರ ಮಾತನಾಡಿ, ಪಾಸ್ವಾನ್ ಅವರು ರೈಲ್ವೆ ಸಚಿವರಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಕಾರ್ಮಿಕ, ರಾಸಾಯನಿಕ ಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.</p>.<p>ಇದಕ್ಕೂ ಮುನ್ನ ಎರಡು ನಿಮಿಷ ಮೌನ ಆಚರಿಸಿ ಪಾಸ್ವಾನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಪಕ್ಷದ ಜಿಲ್ಲಾಧ್ಯಕ್ಷ ರಾಕೇಶ ಕುಲಕರ್ಣಿ, ಔರಾದ್ ತಾಲ್ಲೂಕು ಅಧ್ಯಕ್ಷ ರಾಜಪ್ಪ ದೇಗಲವಾಡೆ ಕೊಳ್ಳೂರು, ಉಪಾಧ್ಯಕ್ಷ ಭರತ ಪೋಕಳವಾರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅನ್ವರ್ ಷಾ, ಉಪಾಧ್ಯಕ್ಷ ಜಾನ್ ನಾಗೋರಕರ್, ಪ್ರವೀಣ ಕುಲಕರ್ಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಲೋಕ ಜನಶಕ್ತಿ ಪಕ್ಷದಿಂದ ನಗರದಲ್ಲಿ ಮಂಗಳವಾರ ಮಾಜಿ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ಅವರ 4ನೇ ಪುಣ್ಯತಿಥಿ ಕಾರ್ಯಕ್ರಮ ಆಚರಿಸಲಾಯಿತು.</p>.<p>ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ನಾಗಶೆಟ್ಟಿ ಪಾಟೀಲ ಸುಂಕನಾಳ ಮಾತನಾಡಿ, ಪಾಸ್ವಾನ್ ಅವರು ದೇಶ ಕಂಡ ಅಪರೂಪದ ಧೀಮಂತ ನಾಯಕರಾಗಿದ್ದರು. ದೀನ ದಲಿತರ, ನೋಂದ ಜನರ ಏಳಿಗೆಗಾಗಿ ಬದುಕು ಸವೆಸಿದ್ದರು. ಅಸಂಖ್ಯ ಬೆಂಬಲಿಗರನ್ನು ಹೊಂದಿದ್ದರು ಎಂದು ಹೇಳಿದರು.</p>.<p>ಸಾಹಿತಿ ರಮೇಶ ಬಿರಾದಾರ ಮಾತನಾಡಿ, ಪಾಸ್ವಾನ್ ಅವರು ರೈಲ್ವೆ ಸಚಿವರಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಕಾರ್ಮಿಕ, ರಾಸಾಯನಿಕ ಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.</p>.<p>ಇದಕ್ಕೂ ಮುನ್ನ ಎರಡು ನಿಮಿಷ ಮೌನ ಆಚರಿಸಿ ಪಾಸ್ವಾನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಪಕ್ಷದ ಜಿಲ್ಲಾಧ್ಯಕ್ಷ ರಾಕೇಶ ಕುಲಕರ್ಣಿ, ಔರಾದ್ ತಾಲ್ಲೂಕು ಅಧ್ಯಕ್ಷ ರಾಜಪ್ಪ ದೇಗಲವಾಡೆ ಕೊಳ್ಳೂರು, ಉಪಾಧ್ಯಕ್ಷ ಭರತ ಪೋಕಳವಾರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅನ್ವರ್ ಷಾ, ಉಪಾಧ್ಯಕ್ಷ ಜಾನ್ ನಾಗೋರಕರ್, ಪ್ರವೀಣ ಕುಲಕರ್ಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>