ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಪಡಿತರ ಧಾನ್ಯ ಜಪ್ತಿ

Last Updated 31 ಮೇ 2020, 16:51 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿರುವ ಅಂಗಡಿ ಸಂಖ್ಯೆ, 29ರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಧಾನ್ಯವನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿ ವಶ ಪಡಿಸಿಕೊಂಡಿದೆ.

550 ಕೆಜಿ ಅಕ್ಕಿ, 300 ಕೆಜಿ ಗೋಧಿ, 250 ಕೆಜಿ ತೊಗರಿ ಬೇಳೆ ಸೇರಿ ಒಟ್ಟು ₹34650 ಮೌಲ್ಯದ ಪಡಿತರ ಧಾನ್ಯ ಮತ್ತು ಅಂಗನವಾಡಿ ಕೇಂದ್ರಕ್ಕೆ ವಿತರಣೆ ಯಾಗುವ 500 ಗ್ರಾಂನ ಒಟ್ಟು 5 ಬ್ಯಾಗ್ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪೌಡರ್ ಪ್ಯಾಕೆಟ್‍ಗಳನ್ನು ವಶಕ್ಕೆ ಪಡೆದು ಅಂಗಡಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ತಿಳಿಸಿದರು.

ಈ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT