ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿ, ‘ಡಾ.ಅಂಬೇಡ್ಕರ್ ಅವರ ಜೀವನ ಶೈಲಿ, ಬರಹ ಹಾಗೂ ಭಾಷಣಗಳು ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗಿವೆ’ ಎಂದು ನುಡಿದರು.
ನ್ಯಾಷನಲ್ ಪ್ರೌಢಶಾಲೆಯ ಪ್ರಾಚಾರ್ಯೆ ಶ್ರೀಲತಾ ಮಾತನಾಡಿ,‘ ವಿಶ್ವಸಂಸ್ಥೆಯು ಡಾ.ಅಂಬೇಡ್ಕರ್ ಅವರ ಪ್ರತಿಭೆಯನ್ನು ಗುರುತಿಸಿ ವಿಶ್ವ ಜ್ಞಾನದಿವಸವನ್ನಾಗಿ ಆಚರಿಸುವಂತೆ ಕರೆ ನೀಡಿದೆ. ಅಲ್ಲದೇ ವಿಶ್ವವಿದ್ಯಾಲಯಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠಗಳನ್ನು ಸ್ಥಾಪಿಸಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದರು.