<p><strong>ಬೀದರ್</strong>: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ತಗ್ಗಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಡುತ್ತಿರುವವರಿಗಿಂತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸಾರಿಗೆ, ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಗಳನ್ನು ಗುರುತಿಸಿ, ಅವುಗಳ ಕುರಿತು ಜಂಟಿ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಿಂದ ರಸ್ತೆ ಅಪಘಾತ ಪ್ರಕರಣಗಳ ಮಾಹಿತಿ ಪಡೆಯಬೇಕು. ಅಪಘಾತಗಳನ್ನು ಕಡಿಮೆ ಮಾಡುವ ದಿಸೆಯಲ್ಲಿ ಸರಿಯಾದ ದತ್ತಾಂಶ ಸಂಗ್ರಹಿಸಿ, ವಿಶ್ಲೇಷಿಸಿ ಸಮಿತಿಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ತಾಲ್ಲೂಕುವಾರು ರಸ್ತೆ, ಹೆದ್ದಾರಿ, ಶಾಲಾ ವಲಯಗಳಲ್ಲಿ ಅಸುರಕ್ಷಿತ ಸ್ಥಳ, ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಬೇಕು. ಅವುಗಳಿಗೆ ಕಡ್ಡಾಯವಾಗಿ ಬಣ್ಣ ಬಳಿಯಬೇಕು. ಎಚ್ಚರಿಕೆಯ ಫಲಕ ಅಳವಡಿಸಬೇಕು ಎಂದು ತಿಳಿಸಿದರು.</p>.<p>ಹೆಲ್ಮೇಟ್, ಸೀಟ್ ಬೆಲ್ಟ್ ಧರಿಸುವುದು ಸೇರಿದಂತೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ನಡೆಸಬೇಕು ಎಂದು ಹೇಳಿದರು.</p>.<p>ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಿಕೊಳ್ಳಲು ಒತ್ತು ಕೊಡಬೇಕು ಎಂದು ತಿಳಿಸಿದರು.</p>.<p>ಆಟೊ ರಿಕ್ಷಾ ಹಾಗೂ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸುವುದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ಕನಿಷ್ಠ ಎರಡು ತಿಂಗಳಿಗೊಮ್ಮೆ ಸಮಿತಿಯ ಸಭೆ ಆಯೋಜಿಸಬೇಕು. ಅಪಘಾತಗಳು, ಅವುಗಳಿಗೆ ಕಾರಣ ಹಾಗೂ ಪರಿಹಾರೋಪಾಯಗಳ ಕುರಿತು ಚರ್ಚೆ ನಡೆಸಬೇಕು ಎಂದು ಹೇಳಿದರು.</p>.<p>ಪ್ರಸಕ್ತ ವರ್ಷ 13 ರಸ್ತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಕೆರೂರ್ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರಾದ ಅಬ್ದುಲ್ ಖದೀರ್, ಅಶೋಕಕುಮಾರ ಕರಂಜಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಆಯುಕ್ತ ಬಸಪ್ಪ ಬಿ.ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ತಗ್ಗಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಡುತ್ತಿರುವವರಿಗಿಂತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸಾರಿಗೆ, ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಗಳನ್ನು ಗುರುತಿಸಿ, ಅವುಗಳ ಕುರಿತು ಜಂಟಿ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಿಂದ ರಸ್ತೆ ಅಪಘಾತ ಪ್ರಕರಣಗಳ ಮಾಹಿತಿ ಪಡೆಯಬೇಕು. ಅಪಘಾತಗಳನ್ನು ಕಡಿಮೆ ಮಾಡುವ ದಿಸೆಯಲ್ಲಿ ಸರಿಯಾದ ದತ್ತಾಂಶ ಸಂಗ್ರಹಿಸಿ, ವಿಶ್ಲೇಷಿಸಿ ಸಮಿತಿಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ತಾಲ್ಲೂಕುವಾರು ರಸ್ತೆ, ಹೆದ್ದಾರಿ, ಶಾಲಾ ವಲಯಗಳಲ್ಲಿ ಅಸುರಕ್ಷಿತ ಸ್ಥಳ, ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಬೇಕು. ಅವುಗಳಿಗೆ ಕಡ್ಡಾಯವಾಗಿ ಬಣ್ಣ ಬಳಿಯಬೇಕು. ಎಚ್ಚರಿಕೆಯ ಫಲಕ ಅಳವಡಿಸಬೇಕು ಎಂದು ತಿಳಿಸಿದರು.</p>.<p>ಹೆಲ್ಮೇಟ್, ಸೀಟ್ ಬೆಲ್ಟ್ ಧರಿಸುವುದು ಸೇರಿದಂತೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ನಡೆಸಬೇಕು ಎಂದು ಹೇಳಿದರು.</p>.<p>ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಿಕೊಳ್ಳಲು ಒತ್ತು ಕೊಡಬೇಕು ಎಂದು ತಿಳಿಸಿದರು.</p>.<p>ಆಟೊ ರಿಕ್ಷಾ ಹಾಗೂ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸುವುದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.</p>.<p>ಕನಿಷ್ಠ ಎರಡು ತಿಂಗಳಿಗೊಮ್ಮೆ ಸಮಿತಿಯ ಸಭೆ ಆಯೋಜಿಸಬೇಕು. ಅಪಘಾತಗಳು, ಅವುಗಳಿಗೆ ಕಾರಣ ಹಾಗೂ ಪರಿಹಾರೋಪಾಯಗಳ ಕುರಿತು ಚರ್ಚೆ ನಡೆಸಬೇಕು ಎಂದು ಹೇಳಿದರು.</p>.<p>ಪ್ರಸಕ್ತ ವರ್ಷ 13 ರಸ್ತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಕೆರೂರ್ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರಾದ ಅಬ್ದುಲ್ ಖದೀರ್, ಅಶೋಕಕುಮಾರ ಕರಂಜಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಆಯುಕ್ತ ಬಸಪ್ಪ ಬಿ.ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>