ಸರ್ಕಾರದ ಸೌಲಭ್ಯ ಪಡೆಯಿರಿ: ‘ರೈತರು ಸ್ವಯಂ ಪ್ರೇರಿತರಾಗಿ ಆಧಾರ್ ಜೋಡಣೆ ಮಾಡಿಸಲು ಮುಂದೆ ಬರುತ್ತಿಲ್ಲ. ಹೀಗಾಗಿ, ಗ್ರಾಮ ಮಟ್ಟದಲ್ಲಿ ಸಿಬ್ಬಂದಿ ಗಣಕಯಂತ್ರದೊಂದಿಗೆ ಧಾವಿಸಿ, ರೈತರಿಗೆ ಮನದಟ್ಟು ಮಾಡಿ ಜೋಡಣೆ ಕಾರ್ಯ ಮಾಡುತ್ತಿದ್ದಾರೆ. ಕಂದಾಯ ನಿರೀಕ್ಷಕರು, ಕಂದಾಯ ಸಿಬ್ಬಂದಿ ಗ್ರಾಮಕ್ಕೆ ಬಂದಾಗ ರೈತರು ಸಹಕಾರ ನೀಡಬೇಕು’ ಎಂದು ತಹಶೀಲ್ದಾರ್ ರಮೇಶ್ ಬಾಬು ಹಾಲು ‘ಪ್ರಜಾವಾಣಿ’ಗೆ ತಿಳಿಸಿದರು.