<p>ಬೀದರ್: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಶಿಥಿಲ ಶಾಲಾ ಕೋಣೆಗಳ ದುರಸ್ತಿಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಆಗಾಗ ಮಳೆ ಸುರಿಯುತ್ತಿರುವ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಕೋಣೆಗಳು ಭದ್ರವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 91 ಶಾಲಾ ಕಟ್ಟಡಗಳು ನಿರ್ಮಾಣ ಹಂತದಲ್ಲಿ ಇವೆ. 54 ಶಾಲಾ ಕೋಣೆಗಳು ಶಿಥಿಲಗೊಂಡಿವೆ ಎಂದು ಶಿಕ್ಷಣಾಧಿಕಾರಿ ತುಳಸಿರಾಮ ದೊಡ್ಡೆ ಮಾಹಿತಿ ನೀಡಿದರು.</p>.<p>₹ 1.24 ಕೋಟಿ ವೆಚ್ಚದ 36 ಕಾಮಗಾರಿಗಳನ್ನು ತಿಂಗಳೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಮೆಟ್ರಿಕ್ ಪೂರ್ವ ವಸತಿ ನಿಲಯಗಳು ಈವರೆಗೆ ಆರಂಭವಾಗಿಲ್ಲ. ಜಿಲ್ಲೆಯ 37 ಮೆಟ್ರಿಕ್ ನಂತರದ ವಸತಿ ನಿಲಯಗಳ ಪೈಕಿ 27 ಮಾತ್ರ ತೆರೆದಿವೆ. 1,004 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಬಿಸಿಎಂ ಅಧಿಕಾರಿ ತಿಳಿಸಿದರು.</p>.<p>ಪಾಲಕರ ಮನವೊಲಿಸಿ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಬರುವಂತೆ ನೋಡಿಕೊಳ್ಳಬೇಕು ಎಂದು ರಾಮಚಂದ್ರನ್ ಆರ್. ಸೂಚಿಸಿದರು.</p>.<p>ಸಭೆಯ ಬುಕ್ಲೆಟ್ನ್ನು ಸಿದ್ಧ ಮಾದರಿಯಲ್ಲಿ ಅಚ್ಚುಕಟ್ಟಾಗಿ ತಯಾರಿಸಲು ಅಧಿಕಾರಿಗಳು ಸಹಕರಿಸಬೇಕು. ಆಯಾ ಇಲಾಖೆಗಳ ಅಧಿಕಾರಿಗಳು ಸಭೆಗೆ ಮುನ್ನವೇ ಕಡ್ಡಾಯವಾಗಿ ಸಹಿ ಮಾಡಿದ ಕಾಪಿಯನ್ನು ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲೆಯ ವಾಡಿಕೆ ಮಳೆ 380 ಮಿ.ಮೀ ಆಗಿದೆ. ಈ ಬಾರಿ 445 ಮಿ.ಮೀ ಅಂದರೆ ಶೇ 17 ರಷ್ಟು ಅಧಿಕ ಮಳೆಯಾಗಿದೆ. ಬೆಳೆಗಳು ಉತ್ತಮವಾಗಿವೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್ ತಿಳಿಸಿದರು.</p>.<p>ಸೋಯಾಬೀನ್ 2,02,000 ಹೆಕ್ಟೇರ್, ತೊಗರಿ 90,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈವರೆಗೆ 24,000 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಲಾಗಿದೆ. 16,000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.</p>.<p>2020-21ನೇ ಸಾಲಿನಲ್ಲಿ ಒಟ್ಟು 56 ರೈತರ ಆತ್ಮಹತ್ಯೆ ಪ್ರಕರಣಗಳ ಪೈಕಿ 37 ರೈತ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>21 ಬಾಲ್ಯ ವಿವಾಹ ತಡೆ: ಜಿಲ್ಲೆಯಲ್ಲಿ 21 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.</p>.<p>ಇಂತಹ ಕೃತ್ಯಕ್ಕೆ ಯಾರಾದರೂ ಕುಮ್ಮಕ್ಕು ನೀಡಿದರೆ ಗಂಭೀರವಾಗಿ ಪರಿಗಣಿಸಿ, ತಮಗೆ ಮಾಹಿತಿ ನೀಡಬೇಕು ರಾಮಚಂದ್ರನ್ ಸೂಚನೆ ನೀಡಿದರು.</p>.<p>ತೋಟಗಾರಿಕೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಕ್ಷರ ದಾಸೋಹ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಡಾ.ಭುವನೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಶಿಥಿಲ ಶಾಲಾ ಕೋಣೆಗಳ ದುರಸ್ತಿಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಆಗಾಗ ಮಳೆ ಸುರಿಯುತ್ತಿರುವ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಕೋಣೆಗಳು ಭದ್ರವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 91 ಶಾಲಾ ಕಟ್ಟಡಗಳು ನಿರ್ಮಾಣ ಹಂತದಲ್ಲಿ ಇವೆ. 54 ಶಾಲಾ ಕೋಣೆಗಳು ಶಿಥಿಲಗೊಂಡಿವೆ ಎಂದು ಶಿಕ್ಷಣಾಧಿಕಾರಿ ತುಳಸಿರಾಮ ದೊಡ್ಡೆ ಮಾಹಿತಿ ನೀಡಿದರು.</p>.<p>₹ 1.24 ಕೋಟಿ ವೆಚ್ಚದ 36 ಕಾಮಗಾರಿಗಳನ್ನು ತಿಂಗಳೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಮೆಟ್ರಿಕ್ ಪೂರ್ವ ವಸತಿ ನಿಲಯಗಳು ಈವರೆಗೆ ಆರಂಭವಾಗಿಲ್ಲ. ಜಿಲ್ಲೆಯ 37 ಮೆಟ್ರಿಕ್ ನಂತರದ ವಸತಿ ನಿಲಯಗಳ ಪೈಕಿ 27 ಮಾತ್ರ ತೆರೆದಿವೆ. 1,004 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಬಿಸಿಎಂ ಅಧಿಕಾರಿ ತಿಳಿಸಿದರು.</p>.<p>ಪಾಲಕರ ಮನವೊಲಿಸಿ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಬರುವಂತೆ ನೋಡಿಕೊಳ್ಳಬೇಕು ಎಂದು ರಾಮಚಂದ್ರನ್ ಆರ್. ಸೂಚಿಸಿದರು.</p>.<p>ಸಭೆಯ ಬುಕ್ಲೆಟ್ನ್ನು ಸಿದ್ಧ ಮಾದರಿಯಲ್ಲಿ ಅಚ್ಚುಕಟ್ಟಾಗಿ ತಯಾರಿಸಲು ಅಧಿಕಾರಿಗಳು ಸಹಕರಿಸಬೇಕು. ಆಯಾ ಇಲಾಖೆಗಳ ಅಧಿಕಾರಿಗಳು ಸಭೆಗೆ ಮುನ್ನವೇ ಕಡ್ಡಾಯವಾಗಿ ಸಹಿ ಮಾಡಿದ ಕಾಪಿಯನ್ನು ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲೆಯ ವಾಡಿಕೆ ಮಳೆ 380 ಮಿ.ಮೀ ಆಗಿದೆ. ಈ ಬಾರಿ 445 ಮಿ.ಮೀ ಅಂದರೆ ಶೇ 17 ರಷ್ಟು ಅಧಿಕ ಮಳೆಯಾಗಿದೆ. ಬೆಳೆಗಳು ಉತ್ತಮವಾಗಿವೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್ ತಿಳಿಸಿದರು.</p>.<p>ಸೋಯಾಬೀನ್ 2,02,000 ಹೆಕ್ಟೇರ್, ತೊಗರಿ 90,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈವರೆಗೆ 24,000 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಲಾಗಿದೆ. 16,000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.</p>.<p>2020-21ನೇ ಸಾಲಿನಲ್ಲಿ ಒಟ್ಟು 56 ರೈತರ ಆತ್ಮಹತ್ಯೆ ಪ್ರಕರಣಗಳ ಪೈಕಿ 37 ರೈತ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>21 ಬಾಲ್ಯ ವಿವಾಹ ತಡೆ: ಜಿಲ್ಲೆಯಲ್ಲಿ 21 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.</p>.<p>ಇಂತಹ ಕೃತ್ಯಕ್ಕೆ ಯಾರಾದರೂ ಕುಮ್ಮಕ್ಕು ನೀಡಿದರೆ ಗಂಭೀರವಾಗಿ ಪರಿಗಣಿಸಿ, ತಮಗೆ ಮಾಹಿತಿ ನೀಡಬೇಕು ರಾಮಚಂದ್ರನ್ ಸೂಚನೆ ನೀಡಿದರು.</p>.<p>ತೋಟಗಾರಿಕೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಕ್ಷರ ದಾಸೋಹ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಡಾ.ಭುವನೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>