ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದುಕೊರತೆ: ಜ್ಯೋತಿ ಕಾಲೊನಿ ರಸ್ತೆ ದುರಸ್ತಿಪಡಿಸಿ

Last Updated 13 ಜನವರಿ 2021, 12:40 IST
ಅಕ್ಷರ ಗಾತ್ರ

ಬೀದರ್: ಜ್ಯೋತಿ ಕಾಲೊನಿಯಲ್ಲಿ ಕಳೆದ ವರ್ಷವೇ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ಪ್ರಸ್ತುತ ನಗರಸಭೆಯು ಒಳಚರಂಡಿ ಪೈಪ್‌ ಅಳವಡಿಸಲು ರಸ್ತೆಗಳನ್ನು ಅಗೆದಿದೆ. ಸುಸ್ಥಿತಿಯಲ್ಲಿದ್ದ ರಸ್ತೆಗಳು ಹಾಳಾಗಿವೆ. ಜನ ಸುಲಭವಾಗಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದಾಗಿ ಪ್ರತಿ ವರ್ಷ ಕೋಟ್ಯಂತರ ಹಣ ಮಣ್ಣು ಪಾಲಾಗುತ್ತಿದೆ. ಒಳಚರಂಡಿ ನಿರ್ಮಿಸುವ ಮಾಹಿತಿ ಇದ್ದರೂ ನಗರಸಭೆ ಅಧಿಕಾರಿಗಳು ಮಾರ್ಚ್‌ ಅಂತ್ಯಕ್ಕೆ ಬಜೆಟ್‌ ಖರ್ಚು ಮಾಡಲು ಜ್ಯೋತಿ ಕಾಲೊನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದರು. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ಮತ್ತೆ ಸಂಪೂರ್ಣ ಅಗೆದು ಹಾಕಿದ್ದಾರೆ.

ರಸ್ತೆಯಲ್ಲಿ ಬೈಕ್‌ಗಳು ಓಡಾಡಲು ಸಾಧ್ಯವಾಗುತ್ತಿಲ್ಲ. ಹದಗೆಟ್ಟ ರಸ್ತೆ ನೋಡಿ ಆಟೊಚಾಲಕರು ಜ್ಯೋತಿ ಕಾಲೊನಿಗೆ ಬರುತ್ತಿಲ್ಲ. ಸಂಬಂಧಪಟ್ಟವರು ತಕ್ಷಣ ರಸ್ತೆ ದುರಸ್ತಿ ಪಡಿಸಿಕೊಡಬೇಕು.

- ಆನಂದ ಪಾಟೀಲ, ಯುವ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT