ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದಾಗಿ ಪ್ರತಿ ವರ್ಷ ಕೋಟ್ಯಂತರ ಹಣ ಮಣ್ಣು ಪಾಲಾಗುತ್ತಿದೆ. ಒಳಚರಂಡಿ ನಿರ್ಮಿಸುವ ಮಾಹಿತಿ ಇದ್ದರೂ ನಗರಸಭೆ ಅಧಿಕಾರಿಗಳು ಮಾರ್ಚ್ ಅಂತ್ಯಕ್ಕೆ ಬಜೆಟ್ ಖರ್ಚು ಮಾಡಲು ಜ್ಯೋತಿ ಕಾಲೊನಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದರು. ಒಂದು ವರ್ಷ ಪೂರ್ಣಗೊಳ್ಳುವ ಮೊದಲೇ ಮತ್ತೆ ಸಂಪೂರ್ಣ ಅಗೆದು ಹಾಕಿದ್ದಾರೆ.