ಬೀದರ್: ಜಿಲ್ಲಾಡಳಿತ ವತಿಯಿಂದ ಇಲ್ಲಿಯ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಧ್ವಜಾರೋಹಣ ನೆರವೇರಿಸಿದರು.
ಶಾಸಕ ರಹೀಂ ಖಾನ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ,
ಶಾಸಕರಾದ ಬಂಡೆಪ್ಪ ಕಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೋದ್ದಿನ್ ಕಚೇರಿವಾಲೆ, ಬುಡಾ ಬಾಬುವಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಂ ಎಂ. ಇದ್ದರು.
ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಅವರು ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿದರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,