‘ಕೋವಿಡ್ ಹರಡುವಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಹೈನುಗಾರಿಕೆ ಒಂದೇ ಆದಾಯದ ಮೂಲವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇರುವ ರಾಸುಗಳಿಗೆ ರೋಗ ತಗುಲಿ ಅವು ಸಾವನಪ್ಪಿದರೆ ರೈತರು ಸಂಪೂರ್ಣವಾಗಿ ಬೀದಿಗೆ ಬರುತ್ತಾರೆ. ಆದ್ದರಿಂದ ಪಶುಪಾಲನಾ ಇಲಾಖೆಯು ಶೀಘ್ರ ಎಚ್ಚೆತ್ತುಕೊಂಡು ವೈದ್ಯರನ್ನು ನೇಮಿಸಬೇಕು’ ಎಂದು ಗ್ರಾಮಸ್ಥರು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರನ್ನು ಒತ್ತಾಯಿಸಿದ್ದಾರೆ.