ಬೆಳೆ ವಿಮೆ ಪಾವತಿಸಿದ ರೈತರಿಗೆ ಪರಿಹಾರ ಕಲ್ಪಿಸಬೇಕು. ಬೆಂಬಲ ಬೆಲೆಯಲ್ಲಿ ಪ್ರತಿ ರೈತರಿಂದ 20 ಕ್ವಿಂಟಲ್ ಉದ್ದು, ಹೆಸರು ಖರೀದಿಸಬೇಕು. ಸಕ್ಕರೆ ಕಾರ್ಖಾನೆಗಳ ರೈತರ ಕಬ್ಬು ಬಾಕಿ ಹಣ ಕೊಡಿಸಬೇಕು. ಮುಂಗಾರು ಹಂಗಾಮಿಗೆ ಶೇ 75 ರಷ್ಟು ರಿಯಾಯಿತಿ ದರದಲ್ಲಿ ಕಡಲೆ ಬೀಜ ವಿತರಿಸಬೇಕು. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ರೈತರಿಗೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.