ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಬಾರದು. ಪದವಿಪೂರ್ವ ಶಿಕ್ಷಣ ಇಲಾಖೆ ನೇಮಕಾತಿಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು. ಗೌರವ ಧನ ಹೆಚ್ಚಿಸಬೇಕು. ವರ್ಷದ ಎಲ್ಲ 12 ತಿಂಗಳು ಗೌರವ ಧನ ಕೊಡಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಕೂಡಲೇ ಪರಿಹಾರ ಒದಗಿಸಬೇಕು. ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯದಲ್ಲಿ ಮೌಲ್ಯಮಾಪಕರನ್ನಾಗಿ ಪರಿಗಣಿಸಬೇಕು. ಸೇವಾ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಬೇಕು. ಇಪಿಎಫ್, ಇಎಸ್ಐ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.