<p><strong>ಹುಲಸೂರ</strong>: ‘18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಹೊಸ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳು ನಾಳೆಯ ಭವಿಷ್ಯ. ಹಾಗಾಗಿ ಮತದಾನ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕಾಂಬಳೆ,‘ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮಹತ್ವ ನೀಡಬೇಕು. ಜತೆಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ನ ಸಂಚಾಲಕ ಡಾ.ಮಾರುತಿಕುಮಾರ, ಪ್ರಾಧ್ಯಾಪಕರಾದ ಬಸವರಾಜ ಮೈಲಾರೆ, ಸಂತೋಷ ಮಹಾಜನ, ಕುಪೇಂದ್ರ ರಾಠೋಡ, ಗಾನಶೃತಿ, ಬೋಧಕೇತರ ಸಿಬ್ಬಂದಿ ರಾಜರೆಡ್ಡಿ, ಮಲ್ಲಿಕಾರ್ಜುನ ಹಾಗೂ ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ‘18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಹೊಸ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ವಿದ್ಯಾರ್ಥಿಗಳು ನಾಳೆಯ ಭವಿಷ್ಯ. ಹಾಗಾಗಿ ಮತದಾನ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕಾಂಬಳೆ,‘ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮಹತ್ವ ನೀಡಬೇಕು. ಜತೆಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಮತದಾರರ ಸಾಕ್ಷರತಾ ಕ್ಲಬ್ನ ಸಂಚಾಲಕ ಡಾ.ಮಾರುತಿಕುಮಾರ, ಪ್ರಾಧ್ಯಾಪಕರಾದ ಬಸವರಾಜ ಮೈಲಾರೆ, ಸಂತೋಷ ಮಹಾಜನ, ಕುಪೇಂದ್ರ ರಾಠೋಡ, ಗಾನಶೃತಿ, ಬೋಧಕೇತರ ಸಿಬ್ಬಂದಿ ರಾಜರೆಡ್ಡಿ, ಮಲ್ಲಿಕಾರ್ಜುನ ಹಾಗೂ ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>