<p><strong>ಬಸವಕಲ್ಯಾಣ</strong>: ಡಿಜಿಟಲ್ ಜನನ ಪ್ರಮಾಣ ಪತ್ರ ದೊರೆಯದ ಕಾರಣ ತೊಂದರೆ ಆಗುತ್ತಿರುವುದರಿಂದ ಶೀಘ್ರದಲ್ಲಿ ಈ ಸಂಬಂಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ದತ್ತಾತ್ರಿ ಗಾದಾ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲ್ಲೂಕು ಘಟಕದಿಂದ ಸೋಮವಾರ ಮನವಿಪತ್ರ ಸಲ್ಲಿಸಲಾಗಿದೆ.</p>.<p>ಕೈಬರಹದ ಜನನ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣಕ್ಕಾಗಿ ಸರ್ಕಾರ ಆದೇಶಿಸಿದೆ. ಆದರೆ, ಇಲ್ಲಿ ಅಂಥ ವ್ಯವಸ್ಥೆ ಇಲ್ಲವಾದ್ದರಿಂದ ಕೆಲ ತಿಂಗಳಿಂದ ಜನರು ಪರದಾಡುತ್ತಿದ್ದಾರೆ. ನೀಟ್, ಸಿಇಟಿ ಮುಂತಾದ ಪ್ರವೇಶ ಪರೀಕ್ಷೆಗಳಿಗಾಗಿ ಡಿಜಿಟಲ್ ಪ್ರಮಾಣ ಪತ್ರದ ಅಗತ್ಯವಿರುತ್ತದೆ ಎಂದರು.</p>.<p>ಈ ಬಗ್ಗೆ ಸಂಬಂಧಿತರಿಗೆ ಹಲವಾರು ಸಲ ವಿನಂತಿಸಿದರೂ ಪ್ರಯೋಜನ ಆಗಿಲ್ಲ. ಇನ್ನು ಮುಂದಾದರೂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಹೋಬಳಿ ಕೇಂದ್ರ ಮುಡಬಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆದಿದೆ. ಈ ಕಾರಣ ಹಾರಕೂಡ ರಸ್ತೆ ಹಾಳಾಗಿದೆ. ಆದ್ದರಿಂದ ಅಂಥ ವಾಹನಗಳ ಸಂಚಾರ ತಡೆಯಬೇಕು ಎಂದು ಸಹ ಕೇಳಿಕೊಳ್ಳಲಾಯಿತು.</p>.<p>ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಚರಣಜೀತ್ ಅಣದೂರೆ, ತಾಲ್ಲೂಕು ಅಧ್ಯಕ್ಷ ಮಹಾಂತೇಶ ಗೌರಕರ್, ಭೀಮಣ್ಣ ಬಗದೂರಿ, ಸುಧೀರ ಖೇಳಗಿ, ವಿನೋದ ರಾಯಗೋಳ, ರಾಜಕುಮಾರ ಮುಡಬಿಕರ್, ಲಿಂಗಾನಂದ, ಧಮ್ಮಾ ಗೋಡಬೋಲೆ, ಸುಮೀತ ನಿಪ್ಪಾಣಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ಡಿಜಿಟಲ್ ಜನನ ಪ್ರಮಾಣ ಪತ್ರ ದೊರೆಯದ ಕಾರಣ ತೊಂದರೆ ಆಗುತ್ತಿರುವುದರಿಂದ ಶೀಘ್ರದಲ್ಲಿ ಈ ಸಂಬಂಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ದತ್ತಾತ್ರಿ ಗಾದಾ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲ್ಲೂಕು ಘಟಕದಿಂದ ಸೋಮವಾರ ಮನವಿಪತ್ರ ಸಲ್ಲಿಸಲಾಗಿದೆ.</p>.<p>ಕೈಬರಹದ ಜನನ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣಕ್ಕಾಗಿ ಸರ್ಕಾರ ಆದೇಶಿಸಿದೆ. ಆದರೆ, ಇಲ್ಲಿ ಅಂಥ ವ್ಯವಸ್ಥೆ ಇಲ್ಲವಾದ್ದರಿಂದ ಕೆಲ ತಿಂಗಳಿಂದ ಜನರು ಪರದಾಡುತ್ತಿದ್ದಾರೆ. ನೀಟ್, ಸಿಇಟಿ ಮುಂತಾದ ಪ್ರವೇಶ ಪರೀಕ್ಷೆಗಳಿಗಾಗಿ ಡಿಜಿಟಲ್ ಪ್ರಮಾಣ ಪತ್ರದ ಅಗತ್ಯವಿರುತ್ತದೆ ಎಂದರು.</p>.<p>ಈ ಬಗ್ಗೆ ಸಂಬಂಧಿತರಿಗೆ ಹಲವಾರು ಸಲ ವಿನಂತಿಸಿದರೂ ಪ್ರಯೋಜನ ಆಗಿಲ್ಲ. ಇನ್ನು ಮುಂದಾದರೂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಹೋಬಳಿ ಕೇಂದ್ರ ಮುಡಬಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆದಿದೆ. ಈ ಕಾರಣ ಹಾರಕೂಡ ರಸ್ತೆ ಹಾಳಾಗಿದೆ. ಆದ್ದರಿಂದ ಅಂಥ ವಾಹನಗಳ ಸಂಚಾರ ತಡೆಯಬೇಕು ಎಂದು ಸಹ ಕೇಳಿಕೊಳ್ಳಲಾಯಿತು.</p>.<p>ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಚರಣಜೀತ್ ಅಣದೂರೆ, ತಾಲ್ಲೂಕು ಅಧ್ಯಕ್ಷ ಮಹಾಂತೇಶ ಗೌರಕರ್, ಭೀಮಣ್ಣ ಬಗದೂರಿ, ಸುಧೀರ ಖೇಳಗಿ, ವಿನೋದ ರಾಯಗೋಳ, ರಾಜಕುಮಾರ ಮುಡಬಿಕರ್, ಲಿಂಗಾನಂದ, ಧಮ್ಮಾ ಗೋಡಬೋಲೆ, ಸುಮೀತ ನಿಪ್ಪಾಣಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>