<p><strong>ಬೀದರ್</strong>: ಕೋವಿಡ್ ನಿಯಂತ್ರಣ ಕಾರ್ಯಾಚರಣೆಗೆ ಜಿಲ್ಲೆಯ ವಿವಿಧ ಕಾಲೇಜುಗಳ ಎನ್ಎಸ್ಎಸ್ ಘಟಕಗಳು, ರೆಡ್ ಕ್ರಾಸ್ ಸಂಸ್ಥೆ, ನೆಹರೂ ಯುವಕೇಂದ್ರ, ಯುವಕ ಸಂಘ ಹಾಗೂ ಇನ್ನಿತರ ಸಂಘ– ಸಂಸ್ಥೆಗಳ ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರು ಬುಧವಾರ ಎನ್ಎಸ್ಎಸ್ ಸಂಯೋಜಕರು, ಯುಥ್ ಕ್ಲಬ್ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿ ಗಳನ್ನು ಆಹ್ವಾನಿಸಿ ಅವರೊಂದಿಗೆ ಸಭೆ ನಡೆಸಿ ಸಹಕಾರ ಕೋರಿದರು.</p>.<p>‘ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ಹಳ್ಳಿಹಳ್ಳಿಗೆ ಹೋಗಿ ಅಲ್ಲಿ ಪಿಡಿಒ, ಗ್ರಾ.ಪಂ ಕಾರ್ಯದರ್ಶಿಗಳ ಸಹಕಾರ ಪಡೆದು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ನೆಹರೂ ಯುವಕೇಂದ್ರದ ಅಧಿಕಾರಿ ಮಯೂರಕುಮಾರ ಗೋರ್ಮೆ, ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಕ್ಲಬ್ನ ಅಧ್ಯಕ್ಷೆ ಮಂಗಳಾ ಮರಕಲೆ, ಶ್ರೀ ವೀರಭದ್ರೇಶ್ವರ ಯುಥ್ ಕ್ಲಬ್ನ ಸತೀಶ ಬೀಳಕೋಟೆ, ಭಗತ್ ಸಿಂಗ್ ಯುಥ್ ಕ್ಲಬ್ನ ಅಂಬಾದಾಸ್ ಕೋರೆ, ರತ್ನದೀಪ ಕಸ್ತೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕೋವಿಡ್ ನಿಯಂತ್ರಣ ಕಾರ್ಯಾಚರಣೆಗೆ ಜಿಲ್ಲೆಯ ವಿವಿಧ ಕಾಲೇಜುಗಳ ಎನ್ಎಸ್ಎಸ್ ಘಟಕಗಳು, ರೆಡ್ ಕ್ರಾಸ್ ಸಂಸ್ಥೆ, ನೆಹರೂ ಯುವಕೇಂದ್ರ, ಯುವಕ ಸಂಘ ಹಾಗೂ ಇನ್ನಿತರ ಸಂಘ– ಸಂಸ್ಥೆಗಳ ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರು ಬುಧವಾರ ಎನ್ಎಸ್ಎಸ್ ಸಂಯೋಜಕರು, ಯುಥ್ ಕ್ಲಬ್ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿ ಗಳನ್ನು ಆಹ್ವಾನಿಸಿ ಅವರೊಂದಿಗೆ ಸಭೆ ನಡೆಸಿ ಸಹಕಾರ ಕೋರಿದರು.</p>.<p>‘ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ಹಳ್ಳಿಹಳ್ಳಿಗೆ ಹೋಗಿ ಅಲ್ಲಿ ಪಿಡಿಒ, ಗ್ರಾ.ಪಂ ಕಾರ್ಯದರ್ಶಿಗಳ ಸಹಕಾರ ಪಡೆದು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ನೆಹರೂ ಯುವಕೇಂದ್ರದ ಅಧಿಕಾರಿ ಮಯೂರಕುಮಾರ ಗೋರ್ಮೆ, ಮಂಗಲಾ ಮಹಿಳಾ ಗ್ರಾಮೀಣ ಅಭಿವೃದ್ಧಿ ಕ್ಲಬ್ನ ಅಧ್ಯಕ್ಷೆ ಮಂಗಳಾ ಮರಕಲೆ, ಶ್ರೀ ವೀರಭದ್ರೇಶ್ವರ ಯುಥ್ ಕ್ಲಬ್ನ ಸತೀಶ ಬೀಳಕೋಟೆ, ಭಗತ್ ಸಿಂಗ್ ಯುಥ್ ಕ್ಲಬ್ನ ಅಂಬಾದಾಸ್ ಕೋರೆ, ರತ್ನದೀಪ ಕಸ್ತೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>