<p><strong>ಬಸವಕಲ್ಯಾಣ:</strong>`ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಜಾಣ ನಡೆ ನಡೆಯುತ್ತಿದೆ. ಇದರಿಂದ ದಲಿತರ ಮೀಸಲಾತಿ ಮೊಟಕಾಗುವ ಭಯವಿದೆ' ಎಂದು ಸಾಹಿತಿ ಡಾ.ಮೋಹನರಾಜ್ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಬೇಲೂರನ ಶರಣ ಉರಿಲಿಂಗ ಪೆದ್ದಿ ಮಠದಲ್ಲಿ ಶಿವಲಿಂಗೇಶ್ವರರ 51 ನೇ ಸ್ಮರಣೋತ್ಸವ ಪ್ರಯುಕ್ತ ಭಾನುವಾರ ನಡೆದ ಶೋಷಿತರ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಶೋಷಿತರು ಶೇ 85ರಷ್ಟು ಇದ್ದಾರೆ. ಆದರೂ ಅವರ ಹಿತಕ್ಕಾಗಿ ಯಾರೂ ಏನೂ ಮಾಡುತ್ತಿಲ್ಲ. ಆದ್ದರಿಂದ ಎಲ್ಲರೂ ಎಚ್ಚೆತ್ತುಕೊಂಡು ಸಾಮಾಜಿಕ ನ್ಯಾಯ ನೀಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದೆ’ ಎಂದರು.</p>.<p>ಸಮ್ಮೇಳನಾಧ್ಯಕ್ಷೆ ಡಾ.ಮಲ್ಲಿಕಾ ಘಂಟೆ, ಮಠಾಧಿಪತಿ ಪಂಚಾಕ್ಷರಿ ಸ್ವಾಮೀಜಿ, ಡಾ.ಗವಿಸಿದ್ದಪ್ಪ ಪಾಟೀಲ, ಜೈಭೀಮ ಹೊಳಕೇರಿ, ಕಂಟೆಪ್ಪ ಮದರಗಾಂವ್, ದಶವಂತ ಬಂಡೆ ಮಾತನಾಡಿದರು.</p>.<p>ಸಾಹಿತಿ ಡಾ.ವಸುಂಧರಾ ಭೂಪತಿ ಹಾಗೂ ಡಾ.ಮೋಹನರಾಜ್ ಅವರಿಗೆ ಪ್ರಸಕ್ತ ಸಾಲಿನ `ಶರಣ ಉರಿಲಿಂಗಪೆದ್ದಿ ಪ್ರಶಸ್ತಿ' ಪ್ರದಾನ ಮಾಡಲಾಯಿತು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮೇತ್ರೆ, ಡಾ.ಜಯದೇವಿ ಗಾಯಕವಾಡ, ಡಾ.ಅನುರಾಧಾ ಬಾಲಕೃಷ್ಣ ರಾಠೋಡ, ನಾಗಪ್ಪ ನಿಣ್ಣೆ, ಮಹಾಲಿಂಗ ಪಂಚಾಕ್ಷರಿ, ಸುರೇಶ ಮೋರೆ, ನಿತ್ಯಾನಂದ ಮಂಠಾಳಕರ್, ನವನಾಥ ಬೆಳ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong>`ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಜಾಣ ನಡೆ ನಡೆಯುತ್ತಿದೆ. ಇದರಿಂದ ದಲಿತರ ಮೀಸಲಾತಿ ಮೊಟಕಾಗುವ ಭಯವಿದೆ' ಎಂದು ಸಾಹಿತಿ ಡಾ.ಮೋಹನರಾಜ್ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಬೇಲೂರನ ಶರಣ ಉರಿಲಿಂಗ ಪೆದ್ದಿ ಮಠದಲ್ಲಿ ಶಿವಲಿಂಗೇಶ್ವರರ 51 ನೇ ಸ್ಮರಣೋತ್ಸವ ಪ್ರಯುಕ್ತ ಭಾನುವಾರ ನಡೆದ ಶೋಷಿತರ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಶೋಷಿತರು ಶೇ 85ರಷ್ಟು ಇದ್ದಾರೆ. ಆದರೂ ಅವರ ಹಿತಕ್ಕಾಗಿ ಯಾರೂ ಏನೂ ಮಾಡುತ್ತಿಲ್ಲ. ಆದ್ದರಿಂದ ಎಲ್ಲರೂ ಎಚ್ಚೆತ್ತುಕೊಂಡು ಸಾಮಾಜಿಕ ನ್ಯಾಯ ನೀಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದೆ’ ಎಂದರು.</p>.<p>ಸಮ್ಮೇಳನಾಧ್ಯಕ್ಷೆ ಡಾ.ಮಲ್ಲಿಕಾ ಘಂಟೆ, ಮಠಾಧಿಪತಿ ಪಂಚಾಕ್ಷರಿ ಸ್ವಾಮೀಜಿ, ಡಾ.ಗವಿಸಿದ್ದಪ್ಪ ಪಾಟೀಲ, ಜೈಭೀಮ ಹೊಳಕೇರಿ, ಕಂಟೆಪ್ಪ ಮದರಗಾಂವ್, ದಶವಂತ ಬಂಡೆ ಮಾತನಾಡಿದರು.</p>.<p>ಸಾಹಿತಿ ಡಾ.ವಸುಂಧರಾ ಭೂಪತಿ ಹಾಗೂ ಡಾ.ಮೋಹನರಾಜ್ ಅವರಿಗೆ ಪ್ರಸಕ್ತ ಸಾಲಿನ `ಶರಣ ಉರಿಲಿಂಗಪೆದ್ದಿ ಪ್ರಶಸ್ತಿ' ಪ್ರದಾನ ಮಾಡಲಾಯಿತು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮೇತ್ರೆ, ಡಾ.ಜಯದೇವಿ ಗಾಯಕವಾಡ, ಡಾ.ಅನುರಾಧಾ ಬಾಲಕೃಷ್ಣ ರಾಠೋಡ, ನಾಗಪ್ಪ ನಿಣ್ಣೆ, ಮಹಾಲಿಂಗ ಪಂಚಾಕ್ಷರಿ, ಸುರೇಶ ಮೋರೆ, ನಿತ್ಯಾನಂದ ಮಂಠಾಳಕರ್, ನವನಾಥ ಬೆಳ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>