<p><strong>ಬೀದರ್: </strong>ಬೀದರ್- ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನರಾರಂಭಿಸಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಒತ್ತಾಯಿಸಿದ್ದಾರೆ.</p>.<p>ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ಈ ಕುರಿತು ಅವರು ಪತ್ರ ಬರೆದಿದ್ದಾರೆ.</p>.<p>ಜನರ ಬಹುದಿನಗಳ ಬೇಡಿಕೆ ಕಾರಣ ಉಡಾನ್ ಯೋಜನೆಯಡಿ ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಶುರು ಮಾಡಲಾಗಿತ್ತು. ಹೈದರಾಬಾದ್ನ ಪ್ರತಿಷ್ಠಿತ ಸಂಸ್ಥೆ ಇದರ ಹೊಣೆ ಹೊತ್ತುಕೊಂಡಿತ್ತು. ಆದರೆ, ಕಡಿಮೆ ಅವಧಿಯಲ್ಲೇ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಬೀದರ್ನ ವಿಮಾನ ನಿಲ್ದಾಣ ಕಚೇರಿಯನ್ನು ಸಂಪರ್ಕಿಸಿದರೂ, ಯಾವ ಕಾರಣಕ್ಕಾಗಿ ವಿಮಾನ ಸೇವೆ ನಿಲ್ಲಿಸಲಾಗಿದೆ ಎನ್ನುವ ಕುರಿತು ನಿಖರ ಮಾಹಿತಿ ದೊರಕುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಈ ಭಾಗದ ಜನರ ಹಿತದೃಷ್ಟಿಯಿಂದ ವಿಮಾನಯಾನ ಸೇವೆಯನ್ನು ಮತ್ತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಬೀದರ್- ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನರಾರಂಭಿಸಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಒತ್ತಾಯಿಸಿದ್ದಾರೆ.</p>.<p>ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಅವರಿಗೆ ಈ ಕುರಿತು ಅವರು ಪತ್ರ ಬರೆದಿದ್ದಾರೆ.</p>.<p>ಜನರ ಬಹುದಿನಗಳ ಬೇಡಿಕೆ ಕಾರಣ ಉಡಾನ್ ಯೋಜನೆಯಡಿ ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಶುರು ಮಾಡಲಾಗಿತ್ತು. ಹೈದರಾಬಾದ್ನ ಪ್ರತಿಷ್ಠಿತ ಸಂಸ್ಥೆ ಇದರ ಹೊಣೆ ಹೊತ್ತುಕೊಂಡಿತ್ತು. ಆದರೆ, ಕಡಿಮೆ ಅವಧಿಯಲ್ಲೇ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಬೀದರ್ನ ವಿಮಾನ ನಿಲ್ದಾಣ ಕಚೇರಿಯನ್ನು ಸಂಪರ್ಕಿಸಿದರೂ, ಯಾವ ಕಾರಣಕ್ಕಾಗಿ ವಿಮಾನ ಸೇವೆ ನಿಲ್ಲಿಸಲಾಗಿದೆ ಎನ್ನುವ ಕುರಿತು ನಿಖರ ಮಾಹಿತಿ ದೊರಕುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಈ ಭಾಗದ ಜನರ ಹಿತದೃಷ್ಟಿಯಿಂದ ವಿಮಾನಯಾನ ಸೇವೆಯನ್ನು ಮತ್ತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>