ಗ್ರಾಮೀಣ ಕ್ರೀಡೋತ್ಸವ ಮುಂದುವರಿಸಬೇಕು. ಯುವ ಚೇತನ, ಯುವ ಪ್ರೇರಣ ಹಾಗೂ ಯುವ ಸಂವಹನ ಕಾರ್ಯಕ್ರಮ ಮುಂದುವರಿಸಬೇಕು ಎಂದು ಆಗ್ರಹಿಸಿದೆ.
ಯುವಜನ ಮೇಳ ಹಾಗೂ ಯುವನೋತ್ಸವ ಕಾರ್ಯಕ್ರೆಮಗಳಿಗೆ ಯುವಕರಿಗೆ ಅನುಕೂಲವಾಗುವ ಜಿಲ್ಲಾ ಮಟ್ಟದ ಜನಪದ ಕಲೆಗಳ ತರಬೇತಿ ಶಿಬಿರ ಆಯೋಜಿಸಬೇಕು. ನಮ್ಮೂರ ಶಾಲೆಗೆ ನಮ್ಮೂರ ಯುವಜನರು ಎಂಬ ಕಾರ್ಯಕ್ರಮವನ್ನು ಈ ಮೊದಲಿನಂತೆ ಯುವಕ ಸಂಘಗಳಿಗೆ ನೀಡಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾಯಿತ ಯುವಕ ಸಂಘಗಳಿಗೆ ಈ ಹಿಂದಿನಂತೆ ಕ್ರೀಡಾ ಉಪಕರಣಗಳನ್ನು ನೀಡಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದೆ.
ರಾಜ್ಯ ರಾಷ್ಟ್ರ ಯುವ ಹಾಗೂ ಕ್ರೀಡಾ ಪ್ರಶಸ್ತಿ ಪುರಸ್ಕೃತರಿಗೆ ಉಚಿತ ಬಸ್ಪಾಸ್ ಹಾಗೂ ವಿಮೆ ಸೌಲಭ್ಯ ಕಲ್ಪಿಸಬೇಕು.
ಯುವ ಸಂಘ-ಸಂಸ್ಥೆಗಳನ್ನು ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಬೇಕೆಂಬ ನಿಯಮವನ್ನು ಸಡಿಲಗೊಳಿಸಿ ಈ ಹಿಂದೆನಂತೆ ಕ್ರೀಡಾ ಇಲಾಖೆಯಲ್ಲಿ ನೋಂದಾಯಿಸಿ ಕಾರ್ಯವಟಿಕೆಗಳನ್ನು ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದೆ.