ಈಗಾಗಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಷುಲ್ಲಕ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.ಸಾಕ್ಷಿ ಸಮೇತ ಕಳ್ಳತನ ಮಾಡುವವರ ಮಾಹಿತಿ ನೀಡಿದವರಿಗೆ ಪಂಚಾಯಿತಿಯಿಂದ ಒಂದು ಸಾವಿರ ರೂಪಾಯಿ ಬಹುಮಾನ ನೀಡಿ, ಸನ್ಮಾನ ಮಾಡಲಾಗುವುದು. ಮಾಹಿತಿ ಕೊಟ್ಟವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ಅವರು ಹೇಳಿದ್ದಾರೆ.