ರಸ್ತೆಯ ಎರಡೂ ಬದಿ ಎಲ್ಲೆಂದರಲ್ಲಿ ಮಣ್ಣಿನ ರಾಶಿಗಳನ್ನು ಹಾಕಲಾಗಿದೆ. ಆ ರಾಶಿಗಳ ಮುಂದೆ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿರುವುದರಿಂದ ಬಸ್, ಆಟೊ, ಬೈಕ್, ಕಾರು ಚಾಲಕರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಕಷ್ಟವಾಗುತ್ತಿದೆ. ಎಲ್ಲೆಂದರಲ್ಲಿ ದೂಳು ಆವರಿಸುತ್ತಿದೆ. ಅಂಗಡಿ ಮಾಲೀಕರು ಅಧಿಕಾರಿಗಳ ವಿರುದ್ಧ ಶಾಪ ಹಾಕುತ್ತಿದ್ದಾರೆ.