<p><strong>ಚಿಟಗುಪ್ಪ:</strong> ‘ಬನ್ನಳ್ಳಿ ಗ್ರಾಮದ ಐತಿಹಾಸಿಕ ಶಿಲ್ಪಕಲಾ ರಾಮಲಿಂಗೇಶ್ವರ ದೇಗುಲದ ಜೀರ್ಣೋದ್ಧಾರಕ್ಕೆ ಭಾರತೀಯ ಪುರಾತತ್ವ ಇಲಾಖೆಯಿಂದ ₹2.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರ ಶ್ರಮದಿಂದ ಬಿಡುಗಡೆಯಾಗಿದ್ದು, ಬೇಗ ದೇಗುಲದ ನಿರ್ಮಾಣ ಕಾರ್ಯ ಆರಂಭವಾಗುತ್ತದೆ’ ಎಂದು ಹಂಪಿಯ ಪುರಾತತ್ವ ಇಲಾಖೆ ಅಧೀಕ್ಷಕ ಡಾ.ನಿಹೆಲ್ ದಾಸ್ ಹೇಳಿದರು.</p>.<p>ತಾಲ್ಲೂಕಿನ ಬನ್ನಳ್ಳಿ ಗ್ರಾಮದ ದೇಗುಲಕ್ಕೆ ಶುಕ್ರವಾರ ಧಾರವಾಡದ ಭಾರತೀಯ ಪುರಾತತ್ವ ಇಲಾಖೆಯ ಧಾರವಾಡ, ಬೀದರನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಗ್ರಾಮಸ್ಥರ ಸಹಕಾರದಿಂದ ಗುಣಮಟ್ಟದ ಕಾಮಗಾರಿ ನಡೆಸಿ ಉತ್ತಮ ರೀತಿಯ ದೇಗುಲ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ಬರಣಿ ಧರನ್, ಬೀದರ್ ಉಪವಲಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ ದೇಸಾಯಿ, ಗ್ರಾಮದ ಗಣ್ಯರಾದ ಹಣಮಂತರಾವ ಪಾಟೀಲ, ಶಿವಾನಂದ ಪಾಟೀಲ, ಬಾನಪ್ಪ ಜಮಾದಾರ, ಚಂದ್ರಶೇಖರ ಪಾಟೀಲ್, ರಾಜರೆಡ್ಡಿ ಚೌಲಾ, ಮಂಜುನಾಥ ಸಲಗಾರ, ವೀರಾರೆಡ್ಡಿ, ಗುರುನಾಥ ಬಿರಾದರ ಪುಂಡಲೀಕ ಬಿರಾದರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ:</strong> ‘ಬನ್ನಳ್ಳಿ ಗ್ರಾಮದ ಐತಿಹಾಸಿಕ ಶಿಲ್ಪಕಲಾ ರಾಮಲಿಂಗೇಶ್ವರ ದೇಗುಲದ ಜೀರ್ಣೋದ್ಧಾರಕ್ಕೆ ಭಾರತೀಯ ಪುರಾತತ್ವ ಇಲಾಖೆಯಿಂದ ₹2.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರ ಶ್ರಮದಿಂದ ಬಿಡುಗಡೆಯಾಗಿದ್ದು, ಬೇಗ ದೇಗುಲದ ನಿರ್ಮಾಣ ಕಾರ್ಯ ಆರಂಭವಾಗುತ್ತದೆ’ ಎಂದು ಹಂಪಿಯ ಪುರಾತತ್ವ ಇಲಾಖೆ ಅಧೀಕ್ಷಕ ಡಾ.ನಿಹೆಲ್ ದಾಸ್ ಹೇಳಿದರು.</p>.<p>ತಾಲ್ಲೂಕಿನ ಬನ್ನಳ್ಳಿ ಗ್ರಾಮದ ದೇಗುಲಕ್ಕೆ ಶುಕ್ರವಾರ ಧಾರವಾಡದ ಭಾರತೀಯ ಪುರಾತತ್ವ ಇಲಾಖೆಯ ಧಾರವಾಡ, ಬೀದರನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಗ್ರಾಮಸ್ಥರ ಸಹಕಾರದಿಂದ ಗುಣಮಟ್ಟದ ಕಾಮಗಾರಿ ನಡೆಸಿ ಉತ್ತಮ ರೀತಿಯ ದೇಗುಲ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ಬರಣಿ ಧರನ್, ಬೀದರ್ ಉಪವಲಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ ದೇಸಾಯಿ, ಗ್ರಾಮದ ಗಣ್ಯರಾದ ಹಣಮಂತರಾವ ಪಾಟೀಲ, ಶಿವಾನಂದ ಪಾಟೀಲ, ಬಾನಪ್ಪ ಜಮಾದಾರ, ಚಂದ್ರಶೇಖರ ಪಾಟೀಲ್, ರಾಜರೆಡ್ಡಿ ಚೌಲಾ, ಮಂಜುನಾಥ ಸಲಗಾರ, ವೀರಾರೆಡ್ಡಿ, ಗುರುನಾಥ ಬಿರಾದರ ಪುಂಡಲೀಕ ಬಿರಾದರ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>