<p><strong>ಬೀದರ್: </strong>ಜಿಲ್ಲೆಯ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆಗಳ ನೋಂದಣಿ ಮಾಡಿಸಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮನವಿ ಮಾಡಿದ್ದಾರೆ.</p>.<p>ಯುನಿವರ್ಸಲ್ ಸೊಂಪೋ ಜನರಲ್ ಇನ್ಶೂರೆನ್ಸ್ ಕಂಪನಿಯು ಈಗಾಗಲೇ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುತ್ತಿದೆ. ಸೋಯಾ, ತೊಗರಿ, ಉದ್ದು, ಹೆಸರು ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ ಬೆಳೆ ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಯು ರೈತರ ಬೆಳೆಯ ಆಪ್ತರಕ್ಷಕವಾಗಿದೆ. ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ನೋಂದಣಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆ ಅಥವಾ ಗೊಂದಲಗಳಿದ್ದರೆ ಇನ್ಶೂರೆನ್ಸ್ ಕಂಪನಿಯ ಟೋಲ್ ಫ್ರೀ ಸಂಖ್ಯೆ 1800-200-5142ಗೆ ಕರೆ ಮಾಡಬಹುದು. ಇಲ್ಲವೇ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.</p>.<p>ಅಗ್ರ ಸ್ಥಾನ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬೀದರ್ ಜಿಲ್ಲೆಯು ಪ್ರತಿ ವರ್ಷ ದೇಶದಲ್ಲೇ ಅಗ್ರಸ್ಥಾನ ಪಡೆಯುತ್ತಿದೆ. ನಾಲ್ಕು ವರ್ಷಗಳಲ್ಲಿ ಜಿಲ್ಲೆಗೆ ರೂ. 350 ಕೋಟಿಗೂ ಅಧಿಕ ಬೆಳೆ ವಿಮೆ ಪರಿಹಾರ ದೊರಕಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆಗಳ ನೋಂದಣಿ ಮಾಡಿಸಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮನವಿ ಮಾಡಿದ್ದಾರೆ.</p>.<p>ಯುನಿವರ್ಸಲ್ ಸೊಂಪೋ ಜನರಲ್ ಇನ್ಶೂರೆನ್ಸ್ ಕಂಪನಿಯು ಈಗಾಗಲೇ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುತ್ತಿದೆ. ಸೋಯಾ, ತೊಗರಿ, ಉದ್ದು, ಹೆಸರು ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ ಬೆಳೆ ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.</p>.<p>ಯೋಜನೆಯು ರೈತರ ಬೆಳೆಯ ಆಪ್ತರಕ್ಷಕವಾಗಿದೆ. ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ನೋಂದಣಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆ ಅಥವಾ ಗೊಂದಲಗಳಿದ್ದರೆ ಇನ್ಶೂರೆನ್ಸ್ ಕಂಪನಿಯ ಟೋಲ್ ಫ್ರೀ ಸಂಖ್ಯೆ 1800-200-5142ಗೆ ಕರೆ ಮಾಡಬಹುದು. ಇಲ್ಲವೇ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.</p>.<p>ಅಗ್ರ ಸ್ಥಾನ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬೀದರ್ ಜಿಲ್ಲೆಯು ಪ್ರತಿ ವರ್ಷ ದೇಶದಲ್ಲೇ ಅಗ್ರಸ್ಥಾನ ಪಡೆಯುತ್ತಿದೆ. ನಾಲ್ಕು ವರ್ಷಗಳಲ್ಲಿ ಜಿಲ್ಲೆಗೆ ರೂ. 350 ಕೋಟಿಗೂ ಅಧಿಕ ಬೆಳೆ ವಿಮೆ ಪರಿಹಾರ ದೊರಕಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>