<p><strong>ಬೀದರ್: </strong>ಜಿಲ್ಲೆಯ ಬಾಪೂರ-ಮಹೆಬೂಬ್ನಗರ ರಾಷ್ಟ್ರೀಯ ಹೆದ್ದಾರಿ 167(ಎನ್ಎಚ್) ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹703.68 ಕೋಟಿ ಅನುದಾನ ಘೋಷಿಸಿದೆ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ರಸ್ತೆಯು ಬಾಪೂರದಿಂದ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿಂಚೋಳಿ ತಾಲ್ಲೂಕಿನ ತುಮಕುಂಟಾ, ಚಿಂಚೋಳಿ ಪಟ್ಟಣ, ಕೊಂಚಾವರಂ ಕ್ರಾಸ್, ಮಿರಿಯಾಣ, ತಾಂಡೂರ, ಕೊಡಂಗಲ್ ಮಾರ್ಗವಾಗಿ ಮಹೆಬೂಬ್ನಗರ ವರೆಗೆ ನಿರ್ಮಾಣವಾಗಿದೆ. ಬೀದರ್ ಕ್ಷೇತ್ರದಲ್ಲಿ ಒಟ್ಟು 49 ಕಿ.ಮೀ ರಸ್ತೆ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.</p>.<p>ಕಳೆದ ವರ್ಷ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇದೀಗ ಹೆದ್ದಾರಿ ನಿರ್ಮಾಣದ ಸಿಹಿ ಸುದ್ದಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>2014ರ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಎಲ್ಲ ರಂಗಗಳಲ್ಲೂ ಸಾಧನೆ ಮಾಡಿದೆ. ಬೀದರ್ ಕ್ಷೇತ್ರದಲ್ಲೂ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ. ಜನ ಅದನ್ನು ಮನಗಂಡಿದ್ದಾರೆ. ಅಭಿವೃದ್ಧಿಯ ಸವಿ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯ ಬಾಪೂರ-ಮಹೆಬೂಬ್ನಗರ ರಾಷ್ಟ್ರೀಯ ಹೆದ್ದಾರಿ 167(ಎನ್ಎಚ್) ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹703.68 ಕೋಟಿ ಅನುದಾನ ಘೋಷಿಸಿದೆ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ರಸ್ತೆಯು ಬಾಪೂರದಿಂದ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿಂಚೋಳಿ ತಾಲ್ಲೂಕಿನ ತುಮಕುಂಟಾ, ಚಿಂಚೋಳಿ ಪಟ್ಟಣ, ಕೊಂಚಾವರಂ ಕ್ರಾಸ್, ಮಿರಿಯಾಣ, ತಾಂಡೂರ, ಕೊಡಂಗಲ್ ಮಾರ್ಗವಾಗಿ ಮಹೆಬೂಬ್ನಗರ ವರೆಗೆ ನಿರ್ಮಾಣವಾಗಿದೆ. ಬೀದರ್ ಕ್ಷೇತ್ರದಲ್ಲಿ ಒಟ್ಟು 49 ಕಿ.ಮೀ ರಸ್ತೆ ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.</p>.<p>ಕಳೆದ ವರ್ಷ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇದೀಗ ಹೆದ್ದಾರಿ ನಿರ್ಮಾಣದ ಸಿಹಿ ಸುದ್ದಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>2014ರ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಎಲ್ಲ ರಂಗಗಳಲ್ಲೂ ಸಾಧನೆ ಮಾಡಿದೆ. ಬೀದರ್ ಕ್ಷೇತ್ರದಲ್ಲೂ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ. ಜನ ಅದನ್ನು ಮನಗಂಡಿದ್ದಾರೆ. ಅಭಿವೃದ್ಧಿಯ ಸವಿ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>