ಬಸವಕಲ್ಯಾಣ: ‘ಚಿಕ್ಕ ವಯಸ್ಸಿನಲ್ಲಿಯೇ ಮಠದ ಜವಾಬ್ದಾರಿ ವಹಿಸಿಕೊಂಡಿರುವ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಧಾರ್ಮಿಕ ಚಟುವಟಿಕೆಯೊಂದಿಗೆ ಸಮಾಜೋದ್ಧಾರ ಕಾರ್ಯವನ್ನೂ ಕೈಗೊಳ್ಳುತ್ತಿದ್ದಾರೆ’ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಶ್ಲಾಘಿಸಿದರು.
ನಗರದ ತ್ರಿಪುರಾಂತ ಗವಿಮಠದಲ್ಲಿ ಬುಧವಾರ ನಡೆದ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ಪಟ್ಟಾಧಿಕಾರದ ವರ್ಧಂತಿ ಮಹೋತ್ಸವದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಂಡುರೆಡ್ಡಿ ಕಮಲಾಪುರೆ ಮಾತನಾಡಿ,‘ಸಮಾಜದಲ್ಲಿ ಸುಖ, ಶಾಂತಿ ನೆಲೆಸುವಲ್ಲಿ ಮಠಾಧೀಶರ ಪಾತ್ರ ಬಹಳಷ್ಟಿದೆ. ಅಭಿನವಶ್ರೀಗಳು ದುಶ್ಚಟ ಬಿಡಿಸುವ ಅಭಿಯಾನವೂ ಹಮ್ಮಿಕೊಂಡಿದ್ದರು’ ಎಂದು ಅವರು ಹೇಳಿದರು.