<p><strong>ಬೀದರ್:</strong> ‘ಬಡ ಯುವತಿಯರ ಸ್ಥಿತಿಗತಿ ಮೇಲೆ ಬೆಳಕು ಚೆಲ್ಲುವ ‘ದಿ ರೂಲರ್ಸ್’ ಚಲನಚಿತ್ರ ಆ.30ರಂದು ತೆರೆ ಕಾಣಲಿದೆ’ ಎಂದು ನಟ, ನಿರ್ದೇಶಕ ಹಾಗೂ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಆ.30ರಂದು ಬೀದರ್ ಹಾಗೂ ಭಾಲ್ಕಿ ಚಿತ್ರಮಂದಿರದಲ್ಲಿ ಏಕಕಾಲಕ್ಕೆ ಚಿತ್ರ ರಿಲೀಸ್ ಆಗಲಿದೆ. 2023ರ ಸೆಪ್ಟೆಂಬರ್ನಲ್ಲಿ ಚಿತ್ರದ ಕಥೆ ಸಿದ್ಧಗೊಂಡಿತ್ತು. ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ದಿನದಂದು ಶೂಟಿಂಗ್ ಆರಂಭಗೊಂಡಿತ್ತು. ಈಗ ಬಿಡುಗಡೆಗೆ ಸಿದ್ಧವಾಗಿದೆ’ ಎಂದು ಹೇಳಿದರು.</p>.<p>ಚಿತ್ರ ನಿರ್ಮಾಣಕ್ಕೆ ₹4.50 ಕೋಟಿ ಖರ್ಚಾಗಿದೆ. ಅಶ್ವತ್ಥ್ ಬೆಳಗೆರೆ ಈ ಚಿತ್ರದ ನಿರ್ಮಾಪಕರು. ಅವರ ಮಾರ್ಗದರ್ಶನದಲ್ಲಿ ನಾನು ನಟಿಸಿದ್ದೇನೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ರಿತುಗೌಡ ನಟಿಯಾಗಿ, ಅವರ ತಾಯಿ ದುರ್ಗಮ್ಮ ಸಹ ಅಭಿನಯಿಸಿದ್ದಾರೆ. ಉದಯ ಭಾಸ್ಕರ್ ಅವರು ನಿರ್ದೇಶಿಸಿ ಪ್ರೋತ್ಸಾಹಿಸಿದ್ದಾರೆ ಎಂದು ವಿವರಿಸಿದರು.</p>.<p>ಶ್ರೀಮಂತ ಯುವಜನರು ಬಡ ಯುವತಿಯರನ್ನು ಪ್ರೇಮ ಪಾಶಕ್ಕೆ ಬೀಳಿಸಿ ವಂಚಿಸುತ್ತಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿತ್ರದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ. ಚಿತ್ರದ ಕೆಲ ತುಣುಕುಗಳನ್ನು ನೋಡಿ ಮಾಜಿ ಸಚಿವರಾದ ಬಿ.ಸಿ.ನಾಗೇಶ, ಮೋಟಮ್ಮ ಅವರು ಭಾವುಕರಾಗಿ ಕಣ್ಣೀರು ಹಾಕಿದರು ಎಂದರು.</p>.<p>ಮಹೇಶ ಗೋರನಾಳಕರ್, ಪ್ರಕಾಶ ರಾವಣ, ಮುಕೇಶ್ ಚಲವಾ, ಸಿದ್ಧಾರ್ಥ ನಾಟೇಕರ್, ಗೋಪಾಲ ದೊಡ್ಡಿ, ಭೀಮರಾವ್, ಲೋಕೇಶ ಕಾಂಬಳೆ, ನೀಲೇಶ ಮೇಲಕೇರಿ, ಮುಕೇಶ್ ಪಾಂಡೆ ಹಾಗೂ ಉದ್ದೇಶ ಸಿಂಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಬಡ ಯುವತಿಯರ ಸ್ಥಿತಿಗತಿ ಮೇಲೆ ಬೆಳಕು ಚೆಲ್ಲುವ ‘ದಿ ರೂಲರ್ಸ್’ ಚಲನಚಿತ್ರ ಆ.30ರಂದು ತೆರೆ ಕಾಣಲಿದೆ’ ಎಂದು ನಟ, ನಿರ್ದೇಶಕ ಹಾಗೂ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಆ.30ರಂದು ಬೀದರ್ ಹಾಗೂ ಭಾಲ್ಕಿ ಚಿತ್ರಮಂದಿರದಲ್ಲಿ ಏಕಕಾಲಕ್ಕೆ ಚಿತ್ರ ರಿಲೀಸ್ ಆಗಲಿದೆ. 2023ರ ಸೆಪ್ಟೆಂಬರ್ನಲ್ಲಿ ಚಿತ್ರದ ಕಥೆ ಸಿದ್ಧಗೊಂಡಿತ್ತು. ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ದಿನದಂದು ಶೂಟಿಂಗ್ ಆರಂಭಗೊಂಡಿತ್ತು. ಈಗ ಬಿಡುಗಡೆಗೆ ಸಿದ್ಧವಾಗಿದೆ’ ಎಂದು ಹೇಳಿದರು.</p>.<p>ಚಿತ್ರ ನಿರ್ಮಾಣಕ್ಕೆ ₹4.50 ಕೋಟಿ ಖರ್ಚಾಗಿದೆ. ಅಶ್ವತ್ಥ್ ಬೆಳಗೆರೆ ಈ ಚಿತ್ರದ ನಿರ್ಮಾಪಕರು. ಅವರ ಮಾರ್ಗದರ್ಶನದಲ್ಲಿ ನಾನು ನಟಿಸಿದ್ದೇನೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ರಿತುಗೌಡ ನಟಿಯಾಗಿ, ಅವರ ತಾಯಿ ದುರ್ಗಮ್ಮ ಸಹ ಅಭಿನಯಿಸಿದ್ದಾರೆ. ಉದಯ ಭಾಸ್ಕರ್ ಅವರು ನಿರ್ದೇಶಿಸಿ ಪ್ರೋತ್ಸಾಹಿಸಿದ್ದಾರೆ ಎಂದು ವಿವರಿಸಿದರು.</p>.<p>ಶ್ರೀಮಂತ ಯುವಜನರು ಬಡ ಯುವತಿಯರನ್ನು ಪ್ರೇಮ ಪಾಶಕ್ಕೆ ಬೀಳಿಸಿ ವಂಚಿಸುತ್ತಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿತ್ರದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ. ಚಿತ್ರದ ಕೆಲ ತುಣುಕುಗಳನ್ನು ನೋಡಿ ಮಾಜಿ ಸಚಿವರಾದ ಬಿ.ಸಿ.ನಾಗೇಶ, ಮೋಟಮ್ಮ ಅವರು ಭಾವುಕರಾಗಿ ಕಣ್ಣೀರು ಹಾಕಿದರು ಎಂದರು.</p>.<p>ಮಹೇಶ ಗೋರನಾಳಕರ್, ಪ್ರಕಾಶ ರಾವಣ, ಮುಕೇಶ್ ಚಲವಾ, ಸಿದ್ಧಾರ್ಥ ನಾಟೇಕರ್, ಗೋಪಾಲ ದೊಡ್ಡಿ, ಭೀಮರಾವ್, ಲೋಕೇಶ ಕಾಂಬಳೆ, ನೀಲೇಶ ಮೇಲಕೇರಿ, ಮುಕೇಶ್ ಪಾಂಡೆ ಹಾಗೂ ಉದ್ದೇಶ ಸಿಂಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>